ಬಿಜೆಪಿ ಕಾಪು ಕ್ಷೇತ್ರ ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದಡಿ ಫಲಾನುಭವಿಗಳ ಸಮಾವೇಶ

ಬಿಜೆಪಿ ಕಾಪು ಕ್ಷೇತ್ರ ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದಡಿ ಇಂದು ಕುಕ್ಕೆಹಳ್ಳಿಯಲ್ಲಿ ಫಲಾನುಭವಿಗಳ ಸಮಾವೇಶ ನಡೆಯಿತು. ಸಮಾವೇಶವನ್ನು ಉದ್ಘಾಟಿಸಿದ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಕಾರ್ಯಕ್ರಮದ ಮಹತ್ವವನ್ನು ವಿವರಿಸಿದರು. ಬಳಿಕ‌ ಮಾತನಾಡಿದ ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಮೋದೀಜಿ ಆಡಳಿತದ ಎಂಟು ವರ್ಷಗಳ ಸಾಧನೆಯನ್ನು ವಿವರಿಸಿ ನಿರಂತರವಾಗಿ ಮೋದೀಜಿಯವರಿಗೆ ಬೆಂಬಲ‌ ನೀಡಲು ಮನವಿ‌ಮಾಡಿದರು. ಕಾಪು ಶಾಸಕರಾದ ಲಾಲಾಜಿಯವರು ಮಾತನಾಡಿ ತಮ್ಮ ಅವಧಿಯಲ್ಲಿ ಆದ ಅಭಿವ್ಯಕ್ತಿ ಕಾರ್ಯಕ್ರಮಗಳನ್ನು ವಿವರಿಸಿದರು. ಫಲಾನುಭವಿಗಳ ಕಾರ್ಯಕ್ರಮದ ಜಿಲ್ಲಾ ಸಂಚಾಲಕರಾದ ಶಿಲ್ಪಾ ಜಿ ಸುವರ್ಣ, ಮಂಡಲ ಸಂಚಾಲಕರಾದ ಮುರಳೀಧರ ಪೈ, ಮಂಡಲ ಪ್ರಧಾನ‌ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಮಂಡಲ ಉಪಾಧ್ಯಕ್ಷರಾದ ಸಂಧ್ಯಾ ಕಾಮತ್ ಸುಭಾಶ್ ನಾಯಕ್, ಮಂಡಲ ಕಾರ್ಯದರ್ಶಿ ಶಂಕರ ಸಾಲ್ಯನ್, ಪಂಚಾಯತ್ ಅಧ್ಯಕ್ಷರಾದ ಪುರಂದರ ಕೋಟ್ಯನ್, ಪಂಚಾಯತ್ ಉಪಾಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು. ಪ್ರವೀಣ್ ಪ್ರಭು ಪ್ರಸ್ತಾವನೆಗೈದರೆ ಮಹಾಶಕ್ತಿಕೇಂದ್ರ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಸಾಲ್ಯನ್ ಕಾರ್ಯಕ್ರಮ ನಿರೂಪಿಸಿದರು. ನೂರಾರು ಫಲಾನುಭವಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply