ಕಾಪು ಪುರಸಭಾ ಮಹಾಶಕ್ತಿಕೇಂದ್ರ ಸಭೆ

ನವೆಂಬರ್ 7 ನೇ ತಾರೀಕಿನಂದು ಕಾಪು ಪೇಟೆಯಲ್ಲಿ ನಡೆಯುವ ಜನಸಂಕಲ್ಪ ಸಮಾವೇಶದ ಪೂರ್ವಭಾವಿಯಾಗಿ ಕಾಪು ಪುರಸಭಾ ವ್ಯಾಪ್ತಿಯ ಮಹಾಶಕ್ತಿಕೇಂದ್ರ ಸಭೆ ಕಾಪು ಬಿಜೆಪಿ ಕಚೇರಿಯಲ್ಲಿ ನಡೆಯಿತು. ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಸಮಾವೇಶದ ಬಗ್ಗೆ ಮಾಹಿತಿ ನೀಡಿ ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು ನಾಗರಿಕರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲು ಪುರಸಭಾ ವ್ಯಾಪ್ತಿಯ ಕಾರ್ಯಕರ್ತರು ಶ್ರಮಿಸಲು ಮನವಿ ಮಾಡಿದರು. ಶಾಸಕರಾದ ಲಾಲಾಜಿ ಆರ್ ಮೆಂಡನ್ ಮಾತನಾಡಿ ಕಾಪು ಕ್ಷೇತ್ರಾದ್ಯಂತ ಆಗ ಅಭಿವ್ಯಕ್ತಿ ಕಾಮಗಾರಿಗಳ ಬಗ್ಗೆ ವಿವರಿಸಿ ಅಭಿವೃದ್ಧಿಗೆ ಸಹಕಾರ ನೀಡಿದ ಮಾನ್ಯ ಮುಖ್ಯ ಮಂತ್ರಿಗಳು ಹಾಗೂ ಮಾಜಿ ಮುಖ್ಯ ಮಂತ್ರಿಗಳಿಗೆ ಧನ್ಯವಾದ ಸಲ್ಲಿಸಲು ಪ್ರತೀ ಬೂತ್ ಗಳಿಂದ ಅಪಾರ ಸಂಖ್ಯೆಯಲ್ಲಿ ಜನ ಭಾಗವಹಿಸಲು ಕರೆ ನೀಡಿದರು. ಪುರಸಭಾ ಉಸ್ತುವಾರಿ ಗಂಗಾಧರ್ ಸುವರ್ಣ ಸಂಘಟಿತವಾಗಿ‌ ಕೆಲಸ ಮಾಡಿ ದೊಡ್ಡ ಕಾರ್ಯಕ್ರಮ ಯಶಸ್ವಿಗಳಿಸಲು ಕರೆ ನೀಡಿದರು. ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ಸಂದೀಪ್ ಶೆಟ್ಟಿ ಅಧ್ಯಕ್ಷತೆ ವಹಿಸಿ ಸ್ವಾಗತಿಸಿದರು. ಕಾಪು ಮಂಡಲ ಪ್ರಧಾನ‌ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾದ ಮಟ್ಟಾರ್ ರತ್ನಾಕರ ಹೆಗ್ಡೆ, ಕಾಪು ಪ್ರಾಧಿಕಾರ ಅಧ್ಯಕ್ಷರಾದ ಸುಧಾಮ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾಪು ಪುರಸಭಾ ಪದಾಧಿಕಾರಿಗಳು, ಪುರಸಭಾ ಸದಸ್ಯರುಗಳು, ಶಕ್ತಿ ಕೇಂದ್ರ ಉಸ್ತುವಾರಿಗಳಾದ ಶಶಿಧರ್ ವಾಗ್ಳೆ, ಸಂದೀಪ್ ಮಜೂರು ಮತ್ತಿತರರು ಉಪಸ್ಥಿತರಿದ್ದರು. ಮಹಾಶಕ್ತಿಕೇಂದ್ರ ಪ್ರಧಾನ‌ಕಾರ್ಯದರ್ಶಿ ಶೈಲೇಶ್ ಧನ್ಯವಾದ ಸಮರ್ಪಿಸಿದರು.

 
 
 
 
 
 
 
 
 
 
 

Leave a Reply