ಕಾರ್ಕಳ : ಎಳ್ಳಾರೆಯಲ್ಲಿ ಶ್ರೀ ಕ್ಷೇ.ಧ.ಗ್ರಾ.ಯೋಜನೆಯ “ಗ್ರಾಮ ಸುಭಿಕ್ಷಾ ಕಾರ್ಯಕ್ರಮ”

ಕಾರ್ಕಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರಿ) ಅಜೆಕಾರು ವಲಯ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ಎಳ್ಳಾರೆ ಲಕ್ಷ್ಮೀ ಜನಾರ್ದನ ದೇವಸ್ಥಾನದಲ್ಲಿ “ಗ್ರಾಮ ಸುಭಿಕ್ಷಾ” ಕಾರ್ಯಕ್ರಮ ನಡೆಯಿತು.

ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಯೋಗೀಶ್ ಮಲ್ಯ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಮುಖ್ಯ ಅತಿಥಿಗಳಾಗಿ ತಾಲೂಕು ಯೋಜನಾಧಿಕಾರಿ ಭಾಸ್ಕರ್ ವಿ ಭಾಗವಹಿಸಿದರು.

ಅಜೆಕಾರು ವಲಯ ಅಧ್ಯಕ್ಷ ಸುರೇಶ್ ಶೆಟ್ಟಿ, ಕಡ್ತಲ ಗ್ರಾ.ಪಂ ಅಧ್ಯಕ್ಷೆ ಮಾಲತಿ ದಿನೇಶ್ ಕುಲಾಲ್,ಅರ್ಚಕ ಜನಾರ್ದನ ಆಚಾರ್ಯ, ತಾಲೂಕು ಸಮನ್ವಯಾಧಿಕಾರಿ ಮಲ್ಲಿಕಾ, ಗ್ರಾ.ಪಂ ಸದಸ್ಯ ದೇವೇಂದ್ರ ಕಾಮತ್ ಎಳ್ಳಾರೆ,ಒಕ್ಕೂಟದ ಅಧ್ಯಕ್ಷೆ ಶಾಂತಿ ಪ್ರಭು, ಉಪಾಧ್ಯಕ್ಷೆ ಸುನಂದಾ, ಸೇವಾ ಪ್ರತಿನಿಧಿ ಹೇಮಾ ಹಾಗು ಒಕ್ಕೂಟದ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.ವಲಯ ಮೇಲ್ವಿಚಾರಕ ಉದಯ್ ಟಿ.ದೇವಾಡಿಗ ಸ್ವಾಗತಿಸಿ, ಶಕುಂತಲ ವಂದಿಸಿದರು.

 
 
 
 
 
 
 
 
 
 
 

Leave a Reply