ಕೇಂದ್ರೀಯ ವಿದ್ಯಾಲಯದಲ್ಲಿ 75ನೇ ಸ್ವಾತಂತ್ರ್ಯೋತ್ಸವ

ಪಠ್ಯ ಶಿಕ್ಷಣದೊಂದಿಗೆ ವಿದ್ಯಾರ್ಥಿಗಳಲ್ಲಿ ದೇಶಭಕ್ತಿಯೂ ಮೂಡಲಿ ಎಂದು ರಕ್ಷಣಾ ಆಹಾರ ಸಂಶೋಧನಾ ಪ್ರಯೋಗಾಲಯದ ಮುಖ್ಯಸ್ಥ ಲೆಫ್ಟಿನೆಂಟ್ ಕರ್ನಲ್ ಯಶ್ ಜೋಷಿ ಹೇಳಿದರು.
ಸಿದ್ಧಾರ್ಥನಗರದ ಕೇಂದ್ರೀಯ ವಿದ್ಯಾಲಯದ ಆವರಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ 75ನೇ ಸ್ವಾತಂತ್ರ್ಯೋತ್ಸವ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ದೇಶಭಕ್ತಿ ಎಂಬುದು ನೌಕರಿಗೆ ಸೇರುವ ಹಂತದಲ್ಲಿ ಬರುವುದಿಲ್ಲ. ಎಳೆವೆಯಲ್ಲೇ ಮೂಡಿದಾಗ ಮಾತ್ರ ಅದಕ್ಕೆ ಅರ್ಥ ಬರುತ್ತದೆ. ಈ ನಿಟ್ಟಿನಲ್ಲಿ ಪಾಲಕರು ಮತ್ತು ಶಿಕ್ಷಕರ ಪಾತ್ರ ಬಹು ದೊಡ್ಡದು ಎಂದವರು ಹೇಳಿದರು.
ಸಾಂಸ್ಕೃತಿಕ ಚಟುವಟಿಕೆ, ಸೇವಾ ಮನೋಭಾವ, ಪ್ರಕೃತಿ ಸಂರಕ್ಷಣೆ ಮುಂತಾದವು ವಿದ್ಯಾರ್ಥಿಗಳಲ್ಲಿ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗುತ್ತವೆ. ಇದನ್ನು ರೂಢಿಸುತ್ತಿರುವ ಕೇಂದ್ರೀಯ ವಿದ್ಯಾಲಯದ ಕಾರ್ಯ ಶ್ಲಾಘನೀಯ ಎಂದರು.

ಪ್ರಾಚಾರ್ಯ ಬಿ. ಬಿನಾಯ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಾಂಸ್ಕೃತಿಕ ಚಟುವಟಿಕೆ ವಿಭಾಗ ಮುಖ್ಯಸ್ಥ ವೈ.ಆರ್. ರಘು, ಎನ್‌ಸಿಸಿ ಅಧಿಕಾರಿ ಸುಮಾಲಿನಿ, ಶಿಕ್ಷಕರಾದ ವಿಜಯ ನಾರಸಿಂಹ, ನಚಿಕೇತ ಮತ್ತಿತರರಿದ್ದರು. ನಂತರ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಮೂಹ ನೃತ್ಯ, ಗಾಯನ, ದೇಶಭಕ್ತಿ ಬಿಂಬಿಸುವ ನೃತ್ಯ ರೂಪಕಗಳ ಪ್ರದರ್ಶನ ನಡೆಯಿತು.

75ನೇ ಸ್ವಾತಂತ್ರ್ಯೋತ್ಸವ ಅಂಗವಾಗಿ ಕೇಂದ್ರೀಯ ವಿದ್ಯಾಲಯದಲ್ಲಿ ಸೋಮವಾರ ವನ ಮಹೋತ್ಸವ ಹಮ್ಮಿಕೊಳ್ಳಲಾಗಿತ್ತು. ಪ್ರಾಚಾರ್ಯ ಬಿ. ಬಿನಾಯ್, ಎನ್‌ಸಿಸಿ ಅಧಿಕಾರಿ ಸುಮಾಲಿನಿ ಮತ್ತು ವಿದ್ಯಾರ್ಥಿಗಳು ಸಸಿ ನೆಟ್ಟರು.

 
 
 
 
 
 
 
 
 
 
 

Leave a Reply