ಕೋರ್ಟ್ ಹೊರಗಡೆಯೇ ಸಮಸ್ಯೆ ಬಗೆಹರಿಸಲು ಪ್ರಯತ್ನಿಸಬೇಕು. ಎಲ್ಲಾ ಕಡೆ ಕೋರ್ಟೆ ಸಮಸ್ಯೆ ಬಗೆಹರಿಸಲು ಸಾಧ್ಯವಿಲ್ಲ. ಸರ್ಕಾರವೇ ಮುಂದೆ ನಿಂತು ಸಮಸ್ಯೆ ಬಗೆಹರಿಸಬೇಕು ಎಂದು ಆಗ್ರಹಿಸಿದರು. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಇಂತಹ ಯಾವುದೇ ಸಮಸ್ಯೆ ಇರಲಿಲ್ಲ.
ಶಾಲೆ ಕಟ್ಟಲು ಸಾಕಷ್ಟು ಹಣ ಬರುತ್ತಿತ್ತು. ಇವತ್ತು ಬಿಜೆಪಿಯವರು ಒಂದು ಶಾಲೆ ಕಟ್ಟಿದ್ದಾರಾ. ಉಚಿತ ಲ್ಯಾಪ್ಟಾಪ್, ಹೆಚ್ಚಿನ ಸ್ಕಾಲರ್ಶಿಪ್ ಕೊಡುತ್ತಿದ್ವೀರಾ. ಈ ಸೌಲಭ್ಯಗಳು ಬಿಜೆಪಿ ಸರ್ಕಾರದಲ್ಲಿದ್ಯ.?. ಶಿಕ್ಷಣ ಸಂಸ್ಥೆಗಳಲ್ಲಿ ಸಮಸ್ಯೆ ಉಂಟು ಮಾಡಿದ್ದು ಬಿಜೆಪಿ. ಕಾಂಗ್ರೆಸ್ ಸಂವಿಧಾನದ ಪ್ರಕಾರ ಕೆಲಸ ಮಾಡ್ತಿದೆ. ರಾಜಕೀಯ ಲಾಭ ಪಡೆಯಲು ಮುಂದಾಗಿರುವವರೇ ಕಾಂಗ್ರೆಸ್ ವಿರುದ್ದ ಮಾತುಗಳನ್ನಾಡುತ್ತಿದ್ದಾರೆ ಯು.ಟಿ.ಖಾದರ್ ಟೀಕಿಸಿದರು.
ಹೆತ್ತವರಿಗೆ ಮಾತ್ರ ಮಕ್ಕಳ ನೋವು ಗೊತ್ತಾಗೋದು. ರಾಜ್ಯ ಸರ್ಕಾರ ಎಲ್ಲಾ ಜಾತಿ ವರ್ಗವನ್ನ ಒಟ್ಟಿಗೆ ಕೊಂಡೊಯ್ಯಬೇಕು. ನಿರ್ಭಯವಾಗಿ ವ್ಯಾಸಂಗ ಮಾಡಲು ಅವಕಾಶ ನೀಡಬೇಕು. ಕೂಡಲೇ ಸರ್ವ ಪಕ್ಷ ಸಭೆ ಕರೆದು ಚರ್ಚೆ ಮಾಡಬೇಕು. ಯು.ಟಿ.ಖಾದರ್ ಹೇಳಿದರು.