ಉಡುಪಿ ಕಿನ್ನಿಮುಲ್ಕಿ ಶ್ರೀ ವೀರಭದ್ರ ದೇವಸ್ಥಾನದ ವಾರ್ಷಿಕ ಮಹೋತ್ಸವ

ಉಡುಪಿ ಕಿನ್ನಿಮುಲ್ಕಿ ಶ್ರೀ ವೀರಭದ್ರ ದೇವಸ್ಥಾನದ ವಾರ್ಷಿಕ ಮಹೋತ್ಸವ 17 ರಿಂದ 19 ರ ತನಕ ಬ್ರಹ್ಮಶ್ರೀ ವೇದಮೂರ್ತಿ ಕೊಯ್ಯೂರು ನಂದಕುಮಾರ ತಂತ್ರಿಗಳ ನೇತೃತ್ವದಲ್ಲಿ ಪ್ರಧಾನ ಅರ್ಚಕರಾದ ವಾದಿರಾಜ ಭಟ್ ಉಪಸ್ಥಿತಿಯಲ್ಲಿ ಉತ್ಸವ ಜರಗಿತು. ಶ್ರೀ ದೇವರಿಗೆ ಕಲಶಾಭಿಷೇಕ,ಮಹಾ ರಂಗಪೂಜೆ ರಾತ್ರಿ ಶ್ರೀ ವೀರಭದ್ರ ದೇವರ ಪುಷ್ಪ ರಥೋತ್ಸವ, ಪದ್ಮಶಾಲಿ ತರುಣ ವೃಂದದ ಸದಸ್ಯರಿಂದ ತುಳಸಿ ಸಂಕೀರ್ತನೆ , ಧರ್ಮ ದೈವಗಳ ಆರಾದನೆ ಮತ್ತು ಮಧ್ಯಾಹ್ನ ಅನ್ನ ಸಂತರ್ಪಣೆ ನಡೆಯಿತು.

ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ
ಪದ್ಮಶಾಲಿ ತರುಣ ವೃಂದದ ಸದಸ್ಯರಿಂದ ಪಿರ ಬರುವೊಲಾ ತುಳು ನಾಟಕ ಮತ್ತು ನೃತ್ಯ ಕಾರ್ಯಕ್ರಮ ನಡೆಯಿತು

ಈ ಸಂಧರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಪ್ರಭಾಶಂಕರ ಪದ್ಮಶಾಲಿ, ಪ್ರಧಾನ ಕಾರ್ಯದರ್ಶಿ ಆತ್ರಾಡಿ ಸತೀಶ್ ಶೆಟ್ಟಿಗಾರ್, ಉಪಾಧ್ಯಕ್ಷ ನಿರಂಜನ್ ಕೆ, ಕಾರ್ಯದರ್ಶಿ ವಿಠಲ ಶೆಟ್ಟಿಗಾರ್ ಕೋಶಾಧಿಕಾರಿ ಗಂಗಾಧರ ಶೆಟ್ಟಿಗಾರ್ ಮತ್ತು ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು ಮತ್ತು ಭಕ್ತಾದಿಗಳು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply