ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಕೋವಿಡ್ ಸಂತ್ರಸ್ತರಿಗೆ ಪರಿಹಾರ ಕಿಟ್ ವಿತರಣೆ

ಉಡುಪಿ : ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ, ಉಡುಪಿ ಜಿಲ್ಲಾ ಬ್ರಾಹ್ಮಣ ಮಹಾಸಭಾ ಹಾಗೂ ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ ಇವರ ಸಹಯೋಗದಲ್ಲಿ ಇತ್ತೀಚೆಗೆ ಸಮಾಜದ ಕೋವಿಡ್ ಸಂತ್ರಸ್ತರಿಗೆ ಪರಿಹಾರ ಕಿಟ್ ಗಳನ್ನು ಜಿಲ್ಲೆಯ ಎಲ್ಲಾ ಬ್ರಾಹ್ಮಣ ವಲಯಗಳ ಮೂಲಕ ವಿತರಿಸುವ ಕಾರ್ಯಕ್ರಮ ಉಡುಪಿಯ ಬ್ರಾಹ್ಮೀ ಸಭಾ ಭವನದಲ್ಲಿ ನಡೆಯಿತು.

ಶಿವರಾಮ ಉಡುಪ, ರಾಜೇಶ್ ಆಸ್ರಣ್ಣ, ನಿರ್ದೇಶಕರು ಬ್ರಾಹ್ಮಣ ಅಭಿವೃದ್ಧಿ ಮಂಡಳಿ, ಕ್ರಷ್ಣಾನಂದ ಚಾತ್ರ, ಅಧ್ಯಕ್ಷರು, ಜಿಲ್ಲಾ ಬ್ರಾಹ್ಮಣ ಮಹಾಸಭಾ, ಹಾಗೂ ಉಡುಪಿ, ಕುಂದಾಪುರ, ಕಾರ್ಕಳ, ಬ್ರಹ್ಮಾವರ ತಾಲ್ಲೂಕು ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ರುಗಳು , ರಂಜನ್ ಕಲ್ಕೂರ, ವಿಷ್ಣು ಮೂರ್ತಿ ಪಾಡಿಗಾರ್ ಯುವ ಬ್ರಾಹ್ಮಣ ಪರಿಷತ್ತು, ಶ್ರೀ ರವಿಪ್ರಕಾಶ್ ತುಶಿಮಾಮ ಮತ್ತು ವಲಯಗಳ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು. ಗಣೇಶ ರಾವ್ ಪ್ರಧಾನ ಕಾರ್ಯದರ್ಶಿ ಸ್ವಾಗತಿಸಿ ಶ್ರೀನಿವಾಸ ಬಲ್ಲಾಳ್ ವಂದಿಸಿದರು. ಜಿಲ್ಲಾ ಸಂಚಾಲಕ ವಾಸುದೇವ್ ಅಡೂರು ಕಾರ್ಯಕ್ರಮ ನಿರೂಪಿಸಿದರು.

 
 
 
 
 
 
 
 
 
 
 

Leave a Reply