ಎಲ್ಲೂರು : ಎಲ್ಲೂರು ಗ್ರಾಮದ ಕುಂಜೂರು ಶ್ರೀ ದುರ್ಗಾ ದೇವಸ್ಥಾನದಲ್ಲಿ ಕೆ.ಎಲ್.ಕುಂಡಂತಾಯರ ಪುಸ್ತಕ ‘ಸೊಡರ ಹಬ್ಬ’ ಬಿಡುಗಡೆಗೊಂಡಿತು. ದೇವಳದ ಅರ್ಚಕ ವೇ.ಮೂ. ಹರಿಕೃಷ್ಣ ಉಡುಪ ಸೊಡರ ಹಬ್ಬವನ್ನು ಬಿಡುಗಡೆಗೊಳಿಸಿ ಆಶೀರ್ವದಿಸಿದರು.
ದೇವಳದ ಆಡಳಿತಾಧಿಕಾರಿ ಶ್ರೀಮತಿ ಮಮತಾ ವೈ ಶೆಟ್ಟಿ , ನಿಕಟಪೂರ್ವ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ದೇವರಾಜ ರಾವ್ , ಪುಣೆ ಉದ್ಯಮಿ ಎರ್ಮಾಳು ನಾರಾಯಣ ಕೆ.ಶೆಟ್ಟಿ, ಸಂಜೀವ ಶೆಟ್ಟಿ , ನಿವೃತ್ತ ಪಾಂಶುಪಾಲ ಸುದರ್ಶನ ವೈ.ಎಸ್.ನಾಗರಾಜ ಉಡುಪ , ಶ್ರೀಧರ ಮಂಜಿತ್ತಾಯ ,ದುರ್ಗಾ ಮಿತ್ರಮಂಡಳಿ ಅಧ್ಯಕ್ಷ ಚಂದ್ರ ಹಾಸ ಆಚಾರ್ಯ, ದೇವಳದ ಪ್ರಬಂಧಕ ರಾಘವೇಂದ್ರ ಶೆಟ್ಟಿ , ಸತೀಶ ಕುಂಡಂತಾಯ, ಭಾರ್ಗವ ಕುಂಡಂತಾಯ ಉಪಸ್ಥಿತರಿದ್ದರು.