ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜ಼್: ರಾಷ್ಟ್ರೀಯ ಯುವ ದಿನಾಚರಣೆ.

ಕಲ್ಯಾಣಪುರ ಮಿಲಾಗ್ರಿಸ್ ವಿದ್ಯಾಸಂಸ್ಥೆಯಲ್ಲಿ ಎನ್ಎಸ್ಎಸ್ ಘಟಕದ ಸಹಯೋಗದಲ್ಲಿ ಜನವರಿ 13ರಂದು ರಾಷ್ಟ್ರೀಯ ಯುವ ದಿನಾಚರಣೆಯನ್ನು ಆಚರಿಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಕಾಲೇಜಿನ ಮುಖ್ಯಸ್ಥರಾಗಿರುವ ಶ್ರೀಯುತ ಅನಿಲ್ ಧಾಂತಿ ಮಾತನಾಡಿ ಸ್ವಾಮಿ ವಿವೇಕಾನಂದರ ಜೀವನ ಆದರ್ಶಗಳು, ಅವರು ಯುವ ಜನತೆಗೆ ನೀಡಿದ ಸಂದೇಶಗಳನ್ನು ಸ್ವಯಂಸೇವಕರುಗಳಿಗೆ ಮನವರಿಕೆ ಮಾಡಿದರು.

ವಿದ್ಯಾರ್ಥಿಗಳಲ್ಲಿ ಗೌರವದ ಭಾವನೆಯ ಜೊತೆಗೆ ದುಶ್ಚಟಗಳಿಗೆ ಬಲಿಯಾಗದೆ ಆತ್ಮವಿಶ್ವಾಸದಿಂದ ಮುನ್ನಡೆಯುವಂತೆ ಪ್ರೇರೇಪಿಸಿದರು. ಅದೇರೀತಿ ವಿವೇಕಾನಂದರ ಬೋಧನೆ ಅವರು ಅನುಸರಿಸಿದ ಮಾರ್ಗವನ್ನು ತಿಳಿಹೇಳಿದರು.

ಕಾಲೇಜಿನ ಪ್ರಾಂಶುಪಾಲರಾದ ವಿನ್ಸೆಂಟ್ ಆಳ್ವಾರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಎನ್ಎಸ್ಎಸ್ ನ ಯೋಜನಾಧಿಕಾರಿಗಳಾದ ಶ್ರೀಮತಿ ಅನುಪಮ ಜೋಗಿ ,ಮೆಲ್ಸನ್ ಡಿಸೋಜ ಮತ್ತು ರೋಟರ್ಯಾಕ್ಟ್ ಅಧ್ಯಕ್ಷ ಮಂಜುನಾಥ್ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಮೆಲೀಶಾ ಸ್ವಾಗತಿಸಿ ,ನಿಖಿತಾ ಧನ್ಯವಾದಸಿ, ದಿವ್ಯ ನಿರೂಪಣ ಕಾರ್ಯವನ್ನು ನಿರ್ವಹಿಸಿದರು.

 
 
 
 
 
 
 
 
 
 
 

Leave a Reply