ಉಡುಪಿ : ಶ್ರೀ ಕೃಷ್ಣ ಮಠದಲ್ಲಿ ಚಾತುರ್ಮಾಸ್ಯ ಸಮಾಪ್ತಿ ದಿನವಾದ ದೇವಪ್ರಬೋಧಿನಿ ಏಕಾದಶಿಯಂದು ಪರ್ಯಾಯ ಅದಮಾರು ಮಠಾಧೀಶರಾದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಹಾಗೂ ಪರ್ಯಾಯ ಅದಮಾರು ಶ್ರೀ ಈಶಪ್ರಿಯತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಪರ್ಯಾಯ ಮಠದ ಪುರೋಹಿತ ಮುದರಂಗಡಿ ಲಕ್ಷ್ಮೀಶ ಆಚಾರ್ಯರು ಸುದರ್ಶನ ಹೋಮದ ಪೂರ್ಣಾಹುತಿ ನಡೆಸಿದರು.
ಹಿರಿಯ ಶ್ರೀಪಾದರು ತಾವೇ ಮುದ್ರಾಧಾರಣೆ ಮಾಡಿಕೊಂಡು ಪರ್ಯಾಯ ಶ್ರೀಪಾದರಿಗೆ ಮುದ್ರಾಧಾರಣೆ ಮಾಡಿದರು. ನಂತರ ಪರ್ಯಾಯ ಅದಮಾರು ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಭಕ್ತಾದಿಗಳಿಗೆ ತಪ್ತ ಮುದ್ರಾಧಾರಣೆ ನಡೆಸಿದರು.