ಮಿಕ್ಸ್ಚರ್ ತಿನ್ನುವಾಗ ಗಂಟಲಿಗೆ ಕಡಲೆಬೀಜ ಸಿಲುಕಿ 4ರ ಬಾಲಕಿ ಸಾವು

ಕೊಚ್ಚಿ: ಕಡಲೆಬೀಜ ಗಂಟಲಲ್ಲಿ ಸಿಲುಕಿ ನಾಲ್ಕು ವರ್ಷದವು ಬಾಲಕಿ ಮೃತಪಟ್ಟಿರುವ ಘಟನೆ ಕೇರಳದ ಕೊಯಿಕ್ಕೋಡ್​ನ ನಾರತ್​ ವೆಸ್ಟ್​ನಲ್ಲಿ ನಡೆದಿದೆ.

ಮೃತ ಬಾಲಕಿಯನ್ನು ತಾನ್ವಿ ಎಂದು ಗುರುತಿಸಲಾಗಿದೆ. ಮೃತ ತಾನ್ವಿ, ಪ್ರವೀಣ್​ ಮತ್ತು ಶರಣ್ಯಾ ದಂಪತಿಯ ಒಬ್ಬಳೇ ಮಗಳು.

ಕಣ್ಣೂರಿನಲ್ಲಿರುವ ಇಂಡಿಯನ್​ ಪಬ್ಲಿಕ್​ ಸ್ಕೂಲ್​ನ ಕಿಂಡರ್​ಗಾರ್ಡನ್​ ವಿದ್ಯಾರ್ಥಿನಿಯಾಗಿದ್ದಳು. ಒಬ್ಬಳೇ ಮಗಳನ್ನು ಕಡೆದುಕೊಂಡ ಪ್ರವೀಣ್​-ಶರಣ್ಯಾ ದಂಪತಿ ಇದೀಗ ಶೋಕ ಸಾಗರದಲ್ಲಿ ಮುಳುಗಿದ್ದಾರೆ.

ಸ್ಥಳೀಯ ಮಾಧ್ಯಮಗಳ ವರದಿಯ ಪ್ರಕಾರ ಈ ಘಟನೆ ಭಾನುವಾರ ರಾತ್ರಿ 9 ಗಂಟೆ ಸುಮಾರಿಗೆ ನಡೆದಿದೆ. ಮಿಕ್ಸ್ಚರ್ ಸ್ನ್ಯಾಕ್​ ತಿನ್ನುವಾಗ ಅದರಲ್ಲಿದ್ದ ಕಡಲೆಬೀಜ ತಾನ್ವಿಯ ಗಂಟಲಲ್ಲಿ ಸಿಲುಕಿ ಉಸಿರಾಡಲು ಆಗದೇ ತಾನ್ವಿ ಕೊನೆಯುಸಿರೆಳೆದಿದ್ದಾಳೆ.

ಕೊಯಿಲ್ಯಾಂಡಿ ತಾಲೂಕು ಆಸ್ಪತ್ರೆಯಿಂದ ಕೊಯಿಕ್ಕೋಡ್​ ವೈದ್ಯಕೀಯ ಕಾಲೇಜಿಗೆ ಸಾಗಿಸುವಾಗ ಮಾರ್ಗ ಮಧ್ಯೆ ತಾನ್ವಿ ಮೃತಪಟ್ಟಿದ್ದಾಳೆ.

 
 
 
 
 
 
 
 
 
 
 

Leave a Reply