ಕೊಡವೂರು ಉಚಿತ ನೇತ್ರ ತಪಾಸಣಾ ಶಿಬಿರ

ಯುವಕ ಸಂಘ ಹಾಗೂ ಹಳೆ ವಿದ್ಯಾರ್ಥಿ ಸಂಘ (ರಿ) ಕೊಡವೂರು,ಗೆಳೆಯರ ಬಳಗ(ರಿ)ಲಕ್ಷ್ಮೀನಗರ, ಕೊಡವೂರು ಫ್ರೆಂಡ್ಸ್ ಕೊಡವೂರು,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಹಾಗೂ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಇವರ ಸಹಭಾಗಿತ್ವದಲ್ಲಿ ಜುಲೈ 10 ರಂದು ಉಚಿತ ನೇತ್ರ ತಪಾಸಣಾ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರವು ಕೊಡವೂರಿನ ವಿಪ್ರಶ್ರೀ ಸಭಾಭವನದಲ್ಲಿ ನಡೆಯಿತು ಕಾರ್ಯಕ್ರಮದ ಉದ್ಘಾಟನೆಯನ್ನು ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟದ ನಿಕಟಪೂರ್ವ ಅಧ್ಯಕ್ಷ ರವಿರಾಜ್ ಹೆಗ್ಡೆ ಕೊಡವೂರು ಇವರು ನೆರವೇರಿಸಿದರು. ಕಾರ್ಯಕ್ರಮದ ಸಂಯೋಜಕರು,ಹಾಗೂ ನಗರಸಭಾ ಸದಸ್ಯ ವಿಜಯ ಕೊಡವೂರು ಪ್ರಸ್ತಾಪಿಸಿದರು. ಮುಖ್ಯ ಅತಿಥಿ ಗಳಾಗಿ ಕೊಡವೂರು ಸಿ.ಎ ಬ್ಯಾಂಕ್ ಅಧ್ಯಕ್ಷ ನಾರಾಯಣ ಬಲ್ಲಾಳ್ ಸಾರ್ವಜನಿಕ ಗಣೇಶೋತ್ಸವ ಮಾಜಿ ಅಧ್ಯಕ ಹರೀಶ್ ಕೊಡವೂರು, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ್ ಕೊಡವೂರು,ಕಸ್ತೂರ್ಬಾ ಆಸ್ಪತ್ರೆಯ ನೇತ್ರ ವಿಭಾಗದ ಡಾ ರಶ್ಮಿ, ಗೆಳೆಯರ ಬಳಗ ಲಕ್ಷ್ಮಿನಗರ ಇದರ ಅಧ್ಯಕ್ಷ ಪ್ರಶಾಂತ್ ಶೆಟ್ಟಿಗಾರ್ ಉಪಸ್ಥಿರಿದ್ದರು.ಶಿಬಿರದಲ್ಲಿ ಭಾಗವಹಿಸಿದ 135 ಮಂದಿಯಲ್ಲಿ ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆ ಅಗತ್ಯವಿರುವ 7 ಮಂದಿಗೆ ಉಚಿತವಾಗಿ ಶಸ್ತ್ರಚಿಕಿತ್ಸೆ ನಡೆಸಲಾಗುವುದು .ಈ ಸಂದರ್ಭದಲ್ಲಿ ಉಡುಪಿ ನಗರಸಭೆಯಲ್ಲಿ ಸುದೀರ್ಘ 40 ವರ್ಷಗಳ ಪ್ರಾಮಾಣಿಕ ಸೇವೆಯನ್ನು ಮಾಡಿ ನಿವೃತ್ತಿ ಗೊಂಡ ಶ್ರೀಧರ್ ಕಾನಂಗಿ ಯವರನ್ನು ಸನ್ಮಾನಿಸಲಾಯಿತು.

 
 
 
 
 
 
 
 
 
 
 

Leave a Reply