ಪಾಳೆಕಟ್ಟೆ ಪರಿಸರದಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರಿಗೆ ಮುಖ್ಯಮಂತ್ರಿ ಆರೋಗ್ಯ ವಿಮಾ ಕಾರ್ಡಿನ ನವೀಕರಣ ಹಾಗೂ ಹೊಸ ಕಾರ್ಡ್ ಮಾಡುವ ಕಾರ್ಯವು ಶ್ರೀ ಮೂಕಾಂಬಿಕಾ ಭಜನಾ ಮಂದಿರದಲ್ಲಿ ನಡೆಯಿತು.
ಈ ಸಂದರ್ಬದಲ್ಲಿ ನಗರ ಸಭಾ ಸದಸ್ಯರಾದ ವಿಜಯ್ ಕೊಡವೂರು ಇವರು ರಾಜ್ಯ ಮತ್ತು ಕೇಂದ್ರ ಸರಕಾರದ ಸವಲತ್ತುಗಳ ಮಾಹಿತಿಯನ್ನು ನೀಡಿದರು.