ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೊಡವೂರು ವತಿಯಿಂದ ಉಡುಪಿ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಗಣೇಶನ ಚಿತ್ರ ಬಿಡಿಸುವ ಸ್ಪರ್ಧೆಯನ್ನು ಆಗಸ್ಟ್ 13ರಂದು ಮಧ್ಯಾಹ್ನ ಗಂಟೆ 2.00ಕ್ಕೆ ಕೊಡವೂರು ಶ್ರೀ ಶಂಕರನಾರಾಯಣ ದೇವಳದ ಸಭಾಂಗಣದಲ್ಲಿ ಆಯೋಜಿಸ ಲಾಗಿದೆ.
ಪ್ರಾಥಮಿಕ ಶಾಲಾ ವಿಭಾಗದಲ್ಲಿ 5 ನೇ ತರಗತಿಯಿಂದ 7 ನೇ ತರಗತಿಯ ವಿದ್ಯಾರ್ಥಿಗಳಿಗೆ ಮಾತ್ರ ಸ್ಪರ್ಧಿಸಲು ಅವಕಾಶ ಕಲ್ಪಿಸಲಾಗಿದ್ದು, ಸ್ಥಳೀಯ ಮಹಿಳೆಯರಿಗೆ ರಂಗವಲ್ಲಿ ಸ್ಪರ್ಧೆಯನ್ನು ಕೂಡ ಅದೇ ಸಂದರ್ಭದಲ್ಲಿ ಹಮ್ಮಿಕೊಳ್ಳ ಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನವರ ಮೊಬೈಲ್ ಸಂಖ್ಯೆಗೆ ಕರೆ ಮಾಡುವಂತೆ ಸಮಿತಿಯ ಪ್ರಕಟಣೆ ತಿಳಿಸಿದೆ.
ಕೃಷ್ಣ ದೇವಾಡಿಗ :9980261549
ಶರತ್ ಚಂದರ್ : 7022809869
ಸತೀಶ್ ಕೊಡವೂರು : 8150824123