ಖಾಸಗಿ ಸ್ಥಳದಲ್ಲಿ ಮಸೀದಿಯವರು ಅಳವಡಿಸಿದ್ದ ಸಿಸಿಟಿವಿಯನ್ನು ತೆರವುಗೊಳಿಸುವಂತೆ ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಪೊಲೀಸರು ಸಿಸಿಟಿವಿಯನ್ನು ತೆರವುಗೊಳಿಸಿದರು. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಅಧಿಕ ಸಂಖ್ಯೆಯಲ್ಲಿ ಪೊಲೀಸ್ ನಿಯೋಜನೆಯಾಗಿತ್ತು.
ಈ ಸಂದರ್ಭದಲ್ಲಿ ನಗರಸಭಾ ಸದಸ್ಯ ವಿಜಯ ಕೊಡವೂರು, ಸಂವೇದನಾ ಪೌಂಡೆಷನ್ ನ ಪ್ರಕಾಶ್ ಮಲ್ಪೆ, ಪಂಚ ಧೂಮಾವತಿ ದೈವಸ್ಥಾನದ ಅಧ್ಯಕ್ಷ ಶುಭಾಶ್ ಮೆಂಡನ್, ಹಾಗು ದೈವಸ್ಥಾನ ಸಮಿತಿಯ ಸದಸ್ಯರು, ಗ್ರಾಮಸ್ಥರು ಅಧಿಕ ಸಂಖ್ಯೆಯಲ್ಲಿ ನೆರೆದಿದ್ದರು.