ಕೋಡಿ-ಕೃಷಿ ಅಭಿಯಾನ ಕಾರ್ಯಕ್ರಮ

ಕೋಟ: ಕೋಡಿ ಗ್ರಾಮ ಪಂಚಾಯತ್ ಕಛೇರಿಯಲ್ಲಿ ಪಂಚಾಯತ್ ಅಧ್ಯಕ್ಷರು ಪ್ರಭಾಕರ ಮೆಂಡನ್ ಅಧ್ಯಕ್ಷತೆಯಲ್ಲಿ ಕೃಷಿ ಅಭಿಯಾನ ಕಾರ್ಯಕ್ರಮ ಇತ್ತೀಚಿಗೆ ಜರುಗಿತು. ಉಡುಪಿ ಸಹಾಯಕ ನಿರ್ದೇಶಕ ಕೃಷಿ ಮೋಹನ್‌ರಾಜ್ ಕೃಷಿ ಇಲಾಖೆಯಲ್ಲಿ ಸಿಗುವ ಸೌಲಭ್ಯಗಳು ಹಾಗೂ ಅದನ್ನು ಪಡೆಯುವ ವಿಧಾನವನ್ನು ತಿಳಿಸಿದರು. ಕಾಯಕ್ರಮದಲ್ಲಿ ಬ್ರಹ್ಮಾವರ ಕೆವಿಕೆ ವಿಜ್ಞಾನಿ ರಂಜಿತ , ಕೋಟ ರೈತ ಸಂಪರ್ಕ ಕೇಂದ್ರದ ಅಧಿಕಾರಿ ಸುಪ್ರಭಾ, ಪಂಚಾಯತ್ ಸದಸ್ಯ ಕೃಷ್ಣ ಪೂಜಾರಿ,ಗೀತಾ ಖಾರ್ವಿ, ಸತೀಶ್ ಜಿ ಕುಂದರ್, ಜಯಶ್ರೀ, , ಕೆಎಫ್‌ಡಿಸಿ, ಉಡುಪಿ ಜಿಲ್ಲೆ ನಿರ್ದೇಶಕ ಸಂದೀಪ್ ಕುಂದರ್ ಗ್ರಾಮಸ್ಥರು, ಪಂಚಾಯತ್ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ದಿ ಅಧಿಕಾರಿ ರವೀಂದ್ರ ರಾವ್ ಸ್ವಾಗತಿಸಿದರು. ಕೋಟ ಸಹಾಯಕ ಕೃಷಿ ಅಧಿಕಾರಿ ಚಂದ್ರ ಶೇಖರ ಶೆಟ್ಟಿ ಕಾರ್ಯಕ್ರಮವನ್ನು ನಿರೂಪಿಸಿದರು.

ಕೋಡಿ ಗ್ರಾಮ ಪಂಚಾಯತ್ ಕಛೇರಿಯಲ್ಲಿ ಪಂಚಾಯತ್ ಅಧ್ಯಕ್ಷರು ಪ್ರಭಾಕರ ಮೆಂಡನ್ ಅಧ್ಯಕ್ಷತೆಯಲ್ಲಿ ಕೃಷಿ ಅಭಿಯಾನ ಕಾರ್ಯಕ್ರಮ ಇತ್ತೀಚಿಗೆ ಜರುಗಿತು. ಬ್ರಹ್ಮಾವರ ಕೆವಿಕೆ ವಿಜ್ಞಾನಿ ರಂಜಿತ , ಕೋಟ ರೈತ ಸಂಪರ್ಕ ಕೇಂದ್ರದ ಅಧಿಕಾರಿ ಸುಪ್ರಭಾ, ಪಂಚಾಯತ್ ಸದಸ್ಯ ಕೃಷ್ಣ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply