ಕಾಂಗ್ರೆಸ್ ಕಾರ್ಯಕರ್ತರಿಂದ ಬಿಜೆಪಿ ಸಚಿವ ಕೋಟ ಶ್ರೀನಿವಾಸ ಪೂಜಾರಿಗೆ ಅಭಿನಂದನೆ~  ಬ್ಯಾನರ್ ವೈರಲ್

ಉಡುಪಿ: ಕೋಟ ಶ್ರೀನಿವಾಸ ಪೂಜಾರಿ ಅವೆರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರದಲ್ಲಿ ಮತ್ತೊಮ್ಮೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಈ ಹಿನ್ನೆಲೆಯಲ್ಲಿ, ಜಿಲ್ಲೆಯ ಹೆಬ್ರಿ ತಾಲೂಕಿನ ಶೇಡಿಮನೆ ಗ್ರಾಮದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಅರಸಮ್ಮಕಾನು ಎಂಬಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಶುಭಾಶಯ ತಿಳಿಸಿ ದೊಡ್ಡದೊಂದು ಬ್ಯಾನರ್ ಅಳವಡಿಸಿದ್ದಾರೆ. ಈ ಬ್ಯಾನರ್​ನ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ. 

 ಸಚಿವ ಕೋಟ ಶ್ರೀನಿವಾಸ ಪೂಜಾರಿ  ವಿಚಾರದಲ್ಲಿ ಮಾತ್ರ ಹಾಗಲ್ಲ, ಅನ್ಯಪಕ್ಷಗಳ ಕಾರ್ಯಕರ್ತರೂ ಬಹಿರಂಗವಾಗಿ ಅಭಿಮಾನ ತೋರಿಸುತ್ತಿ ರುವುದು ಎಲ್ಲರ ಗಮನಸೆಳೆದಿದೆ.

ಜತೆಗೆ ಸಾಮಾಜಿಕ ಜಾಲತಾಣಗಳಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಕುರಿತು ಶ್ಲಾಘನೆ ವ್ಯಕ್ತವಾಗುತ್ತಿದೆ. ಸಾಮರಸ್ಯದ ಉತ್ತಮ ಬೆಳವಣಿಗೆ ಎಂಬುದು ಸಾರ್ವಜನಿಕರ ಅಭಿಪ್ರಾಯ.  

 
 
 
 
 
 
 
 
 

Leave a Reply