ಕೋಟ : ಸಾಧಕರ ಸಾಧನೆಗಳು ಮುಖ್ಯವಾಹಿನಿಗೆ ಬಂದು ಅವರ ಸಾರ್ಥಕ ಬದುಕಿನ ಅನಾವರಣಗೊಂಡು ಯುವ ಪ್ರತಿಭೆಗಳಿಗೆ ದಾರಿದೀಪವಾಗಬೇಕು, ಈ ನಿಟ್ಟಿನಲ್ಲಿ ಪ್ರತಿ ತಿಂಗಳು ದತ್ತಿ ಪುರಸ್ಕಾರದ ಮೂಲಕ ಕಾರಂತ ಥೀಮ್ ಪಾರ್ಕ್ನಲ್ಲಿ ಸಾಧಕರ ನೆನಪುಗಳನ್ನು ಶಾಶ್ವತವಾಗಿಸುವುದರ ಜೊತೆಗೆ ಹೊಸ ಹೊಸ ಪ್ರತಿಭೆಗಳ ಅನಾವರಣವಾಗಲು ವೇದಿಕೆಯಾಗಿರುವುದು ಶ್ಲಾಘನೀಯ ಎಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಮಣೂರು ಇದರ ಆಡಳಿತ ಮಂಡಳಿ ಅಧ್ಯಕ್ಷ ಸತೀಶ್ ಹೆಚ್ ಕುಂದರ್ ಹೇಳಿದರು.
ಅವರು ಕೋಟದ ಕಾರಂತ ಥೀಮ್ ಪಾರ್ಕ್ನಲ್ಲಿ ನಡೆದ ಯಕ್ಷ ಕಿನ್ನರ ಕೋಟ ವೈಕುಂಠ ದತ್ತಿ ಪುರಸ್ಕಾರ ಪ್ರದಾನ ಹಾಗೂ ನಾಟ್ಯ ವೈಭವ ಕಾರ್ಯಕ್ರಮ ವಲ್ಲರಿ-೨೦೨೨(ಪ್ರತಿಭೆಯ ಗೊಂಚಲು) ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಿದ್ದರು.
ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಉದಯ್ ಕುಮಾರ್ ಹೊಸಾಳ್ ಅವರು ದತ್ತಿ ಪುರಸ್ಕಾರದ ಮೂಲಕ ನಮ್ಮಂತಹ ಕಲಾವಿದರನ್ನು ಪ್ರೋತ್ಸಾಹಿಸುತ್ತಿರುವುದಕ್ಕಾಗಿ ಸಂಘಟನೆಯವರಿಗೆ ಧನ್ಯವಾದಗಳು, ಇನ್ನಷ್ಟೂ ಸಾಧಕರನ್ನು ಸಮಾಜಕ್ಕೆ ಪರಿಚಯಿಸುವ ಕಾರ್ಯ ನಿರಂತರವಾಗಿ ನಡೆಯಲಿ ಎಂದರು.
ರವಿ ಶೆಟ್ಟಿ ತಂತ್ರಾಡಿ ಅವರು ನಾನು ಮತ್ತು ಕವನ ಎಂಬ ವಿಷಯಾಧರಿತ ವಿಶೇಷ ಉಪನ್ಯಾಸ ನೀಡಿದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ ಅವರನ್ನು ಗೌರವಿಸಲಾಯಿತು. ವೇದಿಕೆಯಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಅಶ್ವಿನಿ ದಿನೇಶ್, ಯಕ್ಷ ಸಂಘಟಕರಾದ ರಾಜಶೇಖರ್ ಹೆಬ್ಬಾರ್, ಕಾರಂತ ಪ್ರತಿಷ್ಠಾನದ ಟ್ರಸ್ಟಿ ಸುಶೀಲ ಸೋಮಶೇಖರ್, ದಿ.ಕೋಟ ವೈಂಕುಠ ಅವರ ಸುಪುತ್ರಿ ಮಾಲಿನಿ ಕೃಷ್ಣಮೂರ್ತಿ ಅವರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಪ್ರತಿಷ್ಠಾನದ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ ಪ್ರಸ್ತಾಪಿಸಿ, ಕುಮಾರ್ ವಂದಿಸಿ, ಟ್ರಸ್ಟಿ ಸತೀಶ್ ವಡ್ಡರ್ಸೆ ನಿರೂಪಿಸಿದರು.
ಕೋಟದ ಕಾರಂತ ಥೀಮ್ ಪಾರ್ಕ್ನಲ್ಲಿ ನಡೆದ ಯಕ್ಷ ಕಿನ್ನರ ಕೋಟ ವೈಕುಂಠ ದತ್ತಿ ಪುರಸ್ಕಾರ ಪ್ರದಾನ ಹಾಗೂ ನಾಟ್ಯ ವೈಭವ ಕಾರ್ಯಕ್ರಮ ವಲ್ಲರಿ-೨೦೨೨(ಪ್ರತಿಭೆಯ ಗೊಂಚಲು) ಕಾರ್ಯಕ್ರಮದಲ್ಲಿ ಉದಯ್ ಕುಮಾರ್ ಹೊಸಾಳ್ ಇವರಿಗೆ ಯಕ್ಷ ಕಿನ್ನರ ಕೋಟ ವೈಕುಂಠ ದತ್ತಿ ಪುರಸ್ಕಾರ ಪ್ರದಾನ ಮಾಡಲಾಯಿತು. ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಮಣೂರು ಇದರ ಆಡಳಿತ ಮಂಡಳಿ ಅಧ್ಯಕ್ಷ ಸತೀಶ್ ಹೆಚ್ ಕುಂದರ್, ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಅಶ್ವಿನಿ ದಿನೇಶ್, ಯಕ್ಷ ಸಂಘಟಕರಾದ ರಾಜಶೇಖರ್ ಹೆಬ್ಬಾರ್ ಮತ್ತಿತರರು ಉಪಸ್ಥಿತರಿದ್ದರು.