ಧ.ಗ್ರಾ.ಯೋಜನೆಯ ನಮ್ಮೂರು ನಮ್ಮ ಕೆರೆ, ಪಾರಂಪಳ್ಳಿ ಗ್ರಾಮದ ಕೆಮ್ಮಣ್ಣುಕೆರೆ ಹೂಳೆತ್ತುವ ಕಾರ್ಯಕ್ರಮ

ಕೋಟ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ ಬ್ರಹ್ಮಾವರ ತಾಲೂಕು ಕೋಟ ವಲಯದ ಪಾರಂಪಳ್ಳಿ ಕಾರ್ಯಕ್ಷೇತ್ರದ ಸಾಲಿಗ್ರಾಮ ಪಟ್ಟಣ ಪಂಚಾಯತ್ ಕೆಮ್ಮಣ್ಣು ಕೆರೆ ಅಭಿವೃದ್ಧಿ ಸಮಿತಿ ಇವರ ಸಹಭಾಗಿತ್ವದಲ್ಲಿ ೪೧೦ನೇ ನಮ್ಮೂರು ನಮ್ಮ ಕೆರೆ ಕಾರ್ಯಕ್ರಮದಡಿಯಲ್ಲಿ ಪಾರಂಪಳ್ಳಿ ಗ್ರಾಮದ ಕೆಮ್ಮಣ್ಣುಕೆರೆ ಹೂಳೆತ್ತುವ ಕಾಮಗಾರಿಯ ಕಾರ್ಯಕ್ರಮವನ್ನು ಆಯೋಜನೆ ಇತ್ತಿಚಿಗೆ ನಡೆಯಿತು. ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ಹಿರಿಯ ನಿರ್ದೇಶಕ ಗಣೇಶ್ .ಬಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆಮ್ಮಣ್ಣುಕೆರೆ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಸತೀಶ್ ಹಂದೆ ವಹಿಸಿದ್ದರು. ಅಥಿತಿಗಳಾಗಿ ಸಾಲಿಗ್ರಾಮ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಸುಲತಾ ಹೆಗ್ಡೆ, ಉದ್ಯಮಿ ಪಿ. ಸುರೇಶ್ ಹಂದೆ,ಉಪನ್ಯಾಸಕ ಡಾ.ಬಾಲಕೃಷ್ಣ ನಕ್ಷತ್ರಿ, ಧ.ಗ್ರಾ.ಯೋಜನಾಧಿಕಾರಿ ದಿನೇಶ್ ಶೇರಿಗಾರ್, ನಿವೃತ್ತ ಶಿಕ್ಷಕ ವಿಶ್ವನಾಥ ಹಂದೆ, ಒಕ್ಕೂಟದ ಅಧ್ಯಕ್ಷೆ ಸವಿತಾ ಉಪಸ್ಥಿತರಿದ್ದರು. ಮತ್ತು ಗಣ್ಯರ ಸಮ್ಮುಖದಲ್ಲಿ ಕೆರೆ ಕಾಮಗಾರಿಯ ಗುದ್ದಲಿ ಪೂಜೆಯನ್ನು ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ವಲಯದ ಮೇಲ್ವಿಚಾರಕಿ ಸುಲೋಚನ ವಂದಿಸಿದರು.ಆoತರಿಕ ಲೆಕ್ಕಪರಿಶೋಧಕರಾದ ಮಂಜುನಾಥ್ ಜಿ ಸ್ವಾಗತಿಸಿದರು. ಕೃಷಿ ಮೇಲ್ವಿಚಾರಕರಾದ ರಾಜೇಂದ್ರ ಕಾರ್ಯಕ್ರಮವನ್ನು ನಿರೂಪಿಸಿದರು.

ಧ.ಗ್ರಾ.ಯೋಜನೆಯ ನಮ್ಮೂರು ನಮ್ಮ ಕೆರೆ ಪಾರಂಪಳ್ಳಿ ಗ್ರಾಮದ ಕೆಮ್ಮಣ್ಣುಕೆರೆ ಹೂಳೆತ್ತುವ ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ಹಿರಿಯ ನಿರ್ದೇಶಕ ಗಣೇಶ್ .ಬಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು, ಕೆಮ್ಮಣ್ಣುಕೆರೆ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಸತೀಶ್ ಹಂದೆ, ಸಾಲಿಗ್ರಾಮ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಸುಲತಾ ಹೆಗ್ಡೆ, ಉದ್ಯಮಿ ಪಿ. ಸುರೇಶ್ ಹಂದೆ,ಉಪನ್ಯಾಸಕ ಡಾ.ಬಾಲಕೃಷ್ಣ ನಕ್ಷತ್ರಿ ಮತ್ತಿತರರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply