ಸಚಿವ ಶ್ರೀನಿವಾಸ ಪೂಜಾರಿ ಕಾರ್ ಅಪಘಾತ 

ಮುಜರಾಯಿ,ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ಕಾರಿಗೆ ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿಯಾದ ಘಟನೆ ಶುಕ್ರವಾರ ಸಂಜೆ ಸಂಭವಿಸಿದೆ.

ಬೆಂಗಳೂರಿನ ಹೊರವಲಯದ ಕುಂಬಳ ಗೋಡು ಪೊಲೀಸ್ ಠಾಣಾ ವ್ಯಾಪ್ತಿಯ ನೈಸ್ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಸಚಿವರು ಹಾಗೂ ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕಾರಿಗೆ ಪೆಟ್ರೋಲ್ ಹಾಕಿ ಮುಖ್ಯರಸ್ತೆಗೆ ಆಗಮಿಸುವ ಸಂದರ್ಭದಲ್ಲಿ ರಾಜ್ಯ ಸರ್ಕಾರಿ ಬಸ್ಸು ಡಿಕ್ಕಿಯಾದ ಪರಿಣಾಮ ಕಾರಿಗೆ ಹಾನಿಯಾಗಿದ್ದು ಸಚಿವರು ಹಾಗೂ ಚಾಲಕ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.

ಸಚಿವರು ಬೆಂಗಳೂರಿನಿಂದ ಮಂಗಳೂರಿಗೆ ಹಿಂದಿರುಗುತ್ತಿರುವ ವೇಳೆ ಘಟನೆ ಸಂಭವಿಸಿದೆ.

 
 
 
 
 
 
 
 
 
 
 

Leave a Reply