ಕಾಪು ಪುರಸಭೆ ಚುನಾವಣೆ : ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನ ಗಣೇಶ್ ಹರ್ಷ

 ಉಡುಪಿ : ಕಾಪು ಪುರಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಸ್ಪಷ್ಟ ಬಹುಮತಗಳಿಂದ ಅಧಿಕಾರ ಚುಕ್ಕಾಣಿ ಹಿಡಿದಿದ್ದು ಈ ಬಗ್ಗೆ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನ ಗಣೇಶ್ ಹರ್ಷ ವ್ಯಕ್ತಪಡಿಸಿದ್ದಾರೆ.

ಕೇಂದ್ರ,ರಾಜ್ಯ ಸರ್ಕಾರದ ಅಭಿವೃದ್ಧಿ ಕಾರ್ಯ ಮತ್ತು ಪುರಸಭೆಯ ಜನಪರ ಕಾರ್ಯಗಳನ್ನು ಮೆಚ್ಚಿ ಪುರಸಭೆ ವ್ಯಾಪ್ತಿಯ ಮತದಾರರು ಬಿಜೆಪಿ ಯನ್ನು ಆಶೀರ್ವದಿಸಿದ್ದು ಮುಂದಿನ ದಿನಗಳಲ್ಲಿ ಕಾಪು ಪುರಸಭೆಯನ್ನು ಮಾದರಿ ಪುರಸಭೆಯನ್ನಾಗಿ ಮಾಡೋಣ.

ಈ ಗೆಲುವು ಸಂಘಟನೆ ಹಾಗೂ ಪಕ್ಷದ ಕಾರ್ಯಕರ್ತರ ಗೆಲುವೆಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈ ಗೆಲುವಿಗೆ ಸಹಕರಿಸಿದ ಮತದಾರರಿಗೆ ಹಗಲಿರುಳು ಶ್ರಮಿಸಿದ ಪಕ್ಷದ ಕಾರ್ಯಕರ್ತರಿಗೆ ಹಾಗೂ ನಾಯಕರಿಗೆ ಕೃತಜ್ಞತೆ ಹಾಗೂ ಅಭಿನಂದನೆಗಳನ್ನು ತಿಳಿಸಿದ್ದಾರೆ.

 
 
 
 
 
 
 
 
 
 
 

Leave a Reply