ಶ್ರೀಕೃಷ್ಣಮಠದ ರಾಜಾಂಗಣದಲ್ಲಿ,ಪರ್ಯಾಯ ಶ್ರೀಕೃಷ್ಣಾಪುರ ಮಠದ ಆಶ್ರಯದಲ್ಲಿ,ಯಕ್ಷಗಾನ ಕಲಾರಂಗ (ರಿ) ಉಡುಪಿ ಇವರ ಸಂಯೋಜನೆಯಲ್ಲಿ ನಡೆಯುತ್ತಿರುವ ಪ್ರೊ.ಬಿ.ವಿ.ಆಚಾರ್ಯರ ಜನ್ಮ ಶತಾಬ್ದಿ ಸ್ಮರಣೆಯೊಂದಿಗೆ, ವೃತ್ತಿನಿರತ ಯಕ್ಷಗಾನ ಕಲಾವಿದರ 24 ನೇ ವರ್ಷದ ಸಮಾವೇಶದಲ್ಲಿ ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು ಅನುಗ್ರಹಿಸಿದರು.
ಎಡನೀರು ಮಠಾಧೀಶರಾದ ಶ್ರೀಸಚ್ಚಿದಾನಂದ ಭಾರತೀ ಶ್ರೀಪಾದರು ಸಾನ್ನಿಧ್ಯವಹಿಸಿದ್ದರು.ಅಭ್ಯಾಗತರಾಗಿ ಉಡುಪಿ ಶಾಸಕರಾದ ರಘುಪತಿ ಭಟ್,ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷರಾದ ಡಾ.ಜಿ.ಎಲ್.ಹೆಗಡೆ,ಕುಯಿಲಾಡಿ ಸುರೇಶ ನಾಯಕ್,ಹಾರಾಡಿ ನಿತ್ಯಾನಂದ ಶೆಟ್ಟಿ,ಸಿ.ಎ.ಗಣೇಶ್ ಕಾಂಚನ್,ಡಾ.ಚಂದ್ರಶೇಖರ್ ದಾಮ್ಲೆ,ಎಂ.ಕೆ.ಭಟ್,ಕರುಣಾಕರ ಸಾಲಿಯಾನ್,ಕರುಣಾಕರ ಶೆಟ್ಟಿ ಭಾಗವಹಿಸಿದ್ದರು.ಕಲಾರಂಗದ ಅಧ್ಯಕ್ಷರಾದ ಎಂ.ಗಂಗಾಧರ ರಾವ್,ಕಾರ್ಯದರ್ಶಿ ಮುರಳಿ ಕಡೆಕಾರ್,ನಾರಾಯಣ ಹೆಗಡೆ ಮೊದಲಾದವರು ಉಪಸ್ಥಿತರಿದ್ದರು.