ಕರ್ಜೆ ಕಾರ್ತಿಕ ದೀಪೋತ್ಸವ -ಪಟ್ಲ ಸತೀಶ್ ಶೆಟ್ಟಿಗೆ ಸನ್ಮಾನ

ಕೊಕ್ಕರ್ಣೆ : ಕರ್ಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವದ ಪ್ರಯುಕ್ತ ರಂಗಪೂಜೆ, ದೀಪೋತ್ಸವ, ಅನ್ನಸಂತರ್ಪಣೆ ಜರುಗಿತು.

ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಪಾವಂಜೆ ಮೇಳದವರಿಂದ ಯಕ್ಷಗಾನ ಬಯಲಾಟ ಜರುಗಿತು.ತೆಂಕುತಿಟ್ಟಿನ ಪ್ರಸಿದ್ಧ ಭಾಗವತ ಪಟ್ಲ ಸತೀಶ್ ಶೆಟ್ಟಿಯನ್ನು ಮುತ್ತಿನಹಾರದೊಂದಿಗೆ ಸನ್ಮಾನಿಸಲಾಯಿತು.

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಸುಗ್ಗಿ ಸುಧಾಕರ ಶೆಟ್ಟಿ, ಉದಯ್ ಕುಮಾರ್ ಶೆಟ್ಟಿ, ಗುರ್ಮೆ ಸುಧಾಕರ ಶೆಟ್ಟಿ, ಕರ್ಜೆ ಗ್ರಾಮಪಂಚಾಯತ್ ಅಧ್ಯಕ್ಷ ರಾಘವೇಂದ್ರ ಶೆಟ್ಟಿ ಕರ್ಜೆ, ಉದ್ಯಮಿ ಡಾ.ಬಾಲಕೃಷ್ಣ ವೈದ್ಯ ಮುದ್ದೂರು, ಸಿಂಡಿಕೇಟ್ ಬ್ಯಾಂಕ್ ನಿವೃತ್ತ ಸೀನಿಯರ್ ಮ್ಯಾನೇಜರ್ ನರಸಿಂಹ ನಾಯಕ್ ಸಂತೆಕಟ್ಟೆ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಗಣೇಶ್ ಅರಸಮ್ಮನ ಕಾನು ಸ್ವಾಗತಿಸಿ, ನಿರೂಪಿಸಿದರು.

 
 
 
 
 
 
 
 
 
 
 

Leave a Reply