ಕಾರ್ಕಳ : ಸಂಜಿತ್ ಎಂ ದೇವಾಡಿಗ ಸ್ಯಾಕ್ಸೋಫೋನ್ ವಾದನ ಕಾರ್ಯಕ್ರಮ

ಕಾರ್ಕಳ : ಅಜೆಕಾರುವಿನ ಶ್ರೀ ರಾಮಮಂದಿರದಲ್ಲಿ ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನ ಸಮಿತಿ, ಉಡುಪಿ ಜಿಲ್ಲಾ ಪತ್ರಕರ್ತರ ವೇದಿಕೆ ಹಾಗೂ ಇತರ ಸಂಸ್ಥೆಗಳ ಸಹಯೋಗದಲ್ಲಿ ನಡೆದ ಮಕ್ಕಳ ಕರ್ನಾಟಕ ರಾಜ್ಯೋತ್ಸವ ಗೌರವ 2021ರ ಸಮಾರಂಭದಲ್ಲಿ ಕುಂದಾಪುರ ತಾಲೂಕಿನ ಗಂಗೊಳ್ಳಿಯ ಬಾಲ ಕಲಾವಿದ ಸಂಜಿತ್ ಎಂ ದೇವಾಡಿಗ ಸ್ಯಾಕ್ಸೋಫೋನ್ ವಾದನ ಕಾರ್ಯಕ್ರಮವನ್ನು ನೀಡಿದರು. 

ತವಿಲ್ ನಲ್ಲಿ ಗೋಪಾಲ ದೇವಾಡಿಗ, ಮತ್ತು ಹರ್ಷವರ್ಧನ್ ಖಾರ್ವಿ, ತಾಳದಲ್ಲಿ ಮಾಧವ ದೇವಾಡಿಗ ಹಾಗೂ ಗೆಜ್ಜೆಯಲ್ಲಿ ನರೇಂದ್ರ ಎಸ್ ಗಂಗೊಳ್ಳಿ ಸಹಕರಿಸಿದರು. ಸಂಜಿತ್ ಎಮ್ ದೇವಾಡಿಗ ಅವರಿಗೆ ಮಕ್ಕಳ ಕರ್ನಾಟಕ ರಾಜ್ಯೋತ್ಸವ ಗೌರವ ಪುರಸ್ಕಾರವನ್ನು ನೀಡಿ ಸನ್ಮಾನಿಸಲಾಯಿತು.

 
 
 
 
 
 
 
 
 
 
 

Leave a Reply