ಪ್ರಯಾಣಿಕರಿಗೆ ಸಿಹಿ ಸುದ್ದಿ: ಮಹಾರಾಷ್ಟ್ರಕ್ಕೆ ಮತ್ತೆ ಕೆಎಸ್ಆರ್ಟಿಸಿ ಬಸ್ ಸೇವೆ ಆರಂಭ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸೆಪ್ಟೆಂಬರ್ 22 ರಿಂದ ಮಹಾರಾಷ್ಟ್ರಕ್ಕೆ ಬಸ್ ಸೇವೆ ಪುನರಾರಂಭಿಸುವುದಾಗಿ ಶುಕ್ರವಾರ ತಿಳಿಸಿದೆ. ಬೆಂಗಳೂರು, ದಾವಣಗೆರೆ, ಮಂಗಳೂರು ಮತ್ತು ಕರ್ನಾಟಕದ ಇತರ ಸ್ಥಳಗಳಿಂದ ಸೇವೆಗಳನ್ನ ನಿರ್ವಹಿಸ ಲಾಗುವುದು ಎಂದು ಹೇಳಿದೆ.
ಕೊರೋನಾ ಲಾಕ್ ಡೌನ್ ನಿಂದ ಸುಮಾರು ಆರು ತಿಂಗಳ ಕಾಲ ಅಂತಾರಾಜ್ಯ ಬಸ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿತ್ತು. ಈ ತಿಂಗಳ ಆರಂಭದಲ್ಲಿ ಗೋವಾ ಮತ್ತು ಆಂಧ್ರಪ್ರದೇಶಕ್ಕೆ ಸೇವೆಗಳನ್ನ ಪುನರಾರಂಭಿಸಿತ್ತು. ಸದ್ಯ ಸೆಪ್ಟಂಬರ್ 22ರಿಂದ ಮಹಾರಾಷ್ಟ್ರಕ್ಕೆ ಬಸ್ ಸೇವೆಗಳು ಪ್ರಾರಂಭವಾಗಲಿವೆ