ಉಡುಪಿ : ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯೊಂದಿಗೆ ಪ್ರಥಮ ಬಿಬಿಎ ಹಾಗೂ ಬಿ.ಕಾಂ ತರಗತಿಗಳು ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ನವೆಂಬರ್ 12 ರಂದು ಪ್ರಾರಂಭಗೊಂಡವು.
ಕಾಲೇಜಿನ ಪ್ರಾಚಾರ್ಯ ಡಾ.ಮಧುಸೂದನ್ ಭಟ್ ದೀಪ ಬೆಳಗಿಸುವುದರ ಮೂಲಕ ಸಂಕಷ್ಟದ ಸಮಯಗಳು ದೂರವಾಗಿ ಜ್ಞಾನದ ಬೆಳಕಿನ ನಿರಂತರತೆಗೆ ನಾಂದಿ ಹಾಡಿದರು. ಕಾಲೇಜಿನ ವಾಣಿಜ್ಯ ಉಪನ್ಯಾಸಕ ಹರಿಕೇಶವ್ ರಾಷ್ಟ್ರೀಯ ಶಿಕ್ಷಣ ನೀತಿಯ ಬಗೆಗಿನ ಮಾಹಿತಿಯನ್ನು ಒದಗಿಸಿದರು. ಕಾಲೇಜಿನ ಉಪಪ್ರಚಾರ್ಯೆ ಆಶಾ ಹೆಗ್ಡೆ ಉಪಸ್ಥಿತರಿದ್ದರು.
ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕ ಚಂದ್ರಶೇಖರ್ ಸ್ವಾಗತಿಸಿದರು. ಉಪನ್ಯಾಸಕಿ ಇಂದಿರಾ ವಂದಿಸಿ, ವಾಣಿಜ್ಯ ಉಪನ್ಯಾಸಕ ರಾಘವೇಂದ್ರ ಜಿ.ಜಿ ಕಾರ್ಯಕ್ರಮ ನಿರೂಪಿಸಿದರು.