ಯೋಗೇಶ್ ಗೌಡ ಕೊಲೆ ಕೇಸ್:ಕುಲಕರ್ಣಿ ಸಹೋದರರಿಗೆ ಸಿಬಿಐ ಡ್ರಿಲ್ 

ಹುಬ್ಬಳ್ಳಿ: ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐ ನಡೆಸುತ್ತಿದ್ದು, ಇಂದು ಬೆಳಿಗ್ಗೆ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ವಶಕ್ಕೆ ಪಡೆದು ಧಾರವಾಡ ಉಪನಗರ ಠಾಣೆಯಲ್ಲಿ ವಿಚಾರಣೆಗೆ ಒಳಪಡಿಸಿದ್ದರು. ಇದೇ ರೀತಿ ಅವರ ಸಹೋದರ ವಿಜಯ್ ಕುಲಕರ್ಣಿ ಅವರ ಪ್ರಗತಿ ಕಾಲನಿಯಲ್ಲಿರುವ ವಿಜಯ್ ಮನೆಗೆ ಅವರನ್ನೂ ವಶಕ್ಕೆ ತೆಗೆದುಕೊಂಡು ಉಪನಗರ ಠಾಣೆಗೆ ಕರೆದೊಯ್ದಿದ್ದಾರೆ.

ಅಲ್ಲಿ ಇಬ್ಬರನ್ನೂ ಒಟ್ಟಿಗೆ ಕೂರಿಸಿ ವಿಚಾರಣೆ ಮುಂದುವರಿಸಿದ್ದಾರೆ. ವಿಜಯ್ ಕುಲಕರ್ಣಿ ಅವರಿಗೆ ಶರ್ಟ್​ ಬದಲಾಯಿಸಲು ಅವಕಾಶ ಕೊಡದೆ ಅಧಿಕಾರಿಗಳು ಕರೆದೊಯ್ದಿದ್ದಾರೆ. ಈ ಪ್ರಕರಣದಲ್ಲಿ ಹಾವೇರಿ ಎಎಸ್ಪಿ ಮಲ್ಲಿಕಾರ್ಜುನ್ ರವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಇದೇ ವೇಳೆ, ಕುಲಕರ್ಣಿ ಸಹೋದರರನ್ನು ಬಂಧಿಸಿರುವ ವಿಚಾರ ಬಹಿರಂಗವಾಗುತ್ತಿದ್ದಂತೆ ಉಪನಗರ ಪೊಲೀಸ್ ಠಾಣೆ ಎದುರು ಅವರ ಬೆಂಬಲಿಗರು ಬಂದು ಸೇರಿದ್ದಾರೆ.

ಧಾರವಾಡ ಜಿಲ್ಲಾ ಗ್ರಾಮೀಣ ಘಟಕದ ಅಧ್ಯಕ್ಷ ಅನಿಲ್ ಕುಮಾರ ಪಾಟೀಲ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಮತ್ತು ಅವರ ಬೆಂಬಲಿಗರೇ ಹೆಚ್ಚಿನ ಸಂಖ್ಯೆಯಲ್ಲಿದ್ದು, ಠಾಣೆ ಸುತ್ತ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.
 
 
 
 
 
 
 
 
 
 
 

Leave a Reply