ಕುಂದಾಪುರದ ಅಕ್ರಮ ಕಸಾಯಿಖಾನೆಗೆ ದಾಳಿ : 23 ದನಗಳ ರಕ್ಷಣೆ

ಕುಂದಾಪುರ: ಅಕ್ರಮ ಕಸಾಯಿಖಾನೆಗೆ ದಾಳಿ ನಡೆಸಿದ ಕುಂದಾಪುರ ಗ್ರಾಮಾಂತರ ಠಾಣೆಯ ಪೊಲೀಸರು ಮಾಂಸಕ್ಕಾಗಿ ಕೂಡಿಟ್ಟಿದ್ದ 23 ದನಗಳನ್ನು ರಕ್ಷಣೆ ಮಾಡಿದ ಘಟನೆ ಗುಳ್ವಾಡಿ ಎಂಬಲ್ಲಿ ಭಾನುವಾರ ನಡೆದಿದೆ.

ತಾಲೂಕಿನಲ್ಲಿ ಆಗಾಗ ದನಗಳು ಕಳವಾಗುತ್ತಿರುವ ಹಿನ್ನಲೆಯಲ್ಲಿ ಕಾರ್ಯಾಚರಣೆ ನಡೆಸಿದ ಹಿಂದೂ ಸಂಘಟನೆ ಕಾರ್ಯಕರ್ತರು ಮತ್ತು ಕುಂದಾಪುರ ಗ್ರಾಮಾಂತರ ಠಾಣೆಯ ಪೊಲೀಸರ ನೆರವಿನೊಂದಿಗೆ ಗುಳ್ವಾಡಿ ಅಬೂಬಕ್ಕರ್ ಮನೆಗೆ ದಾಳಿ ಮಾಡಿದ್ದಾರೆ.ಈ ವೇಳೆ ಮನೆಯಲ್ಲಿ ಮಾಂಸಕ್ಕಾಗಿ ದನಗಳನ್ನು ಕೂಡಿ ಹಾಕಿರುವುದು ಕಂಡುಬಂದಿದ್ದು, ಪೊಲೀಸರು ಅವುಗಳನ್ನು ರಕ್ಷಿಸಿದ್ದಾರೆ. ದಾಳಿಯ ವೇಳೆ ಆರೋಪಿ ಅಬೂಬಕ್ಕರ್ ಸ್ಥಳದಿಂದ ಪರಾರಿಯಾಗಿದ್ದಾನೆ. ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 
 
 
 
 
 
 
 
 
 
 

Leave a Reply