ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿ

ವಿಶ್ವ ಭಾರತಿ ಕರ್ನಾಟಕ ಪ್ರತಿಷ್ಠಾನ ಬೆನಗಲ್ ಪ್ರಾಯೋಜಿತ  ಕವಿ ಕುರಾಡಿ ಸೀತಾರಾಮ ಅಡಿಗರ ನೆನಪಿನ  ‘ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿ’ ಗಾಗಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ( ರಿ) ಉಡುಪಿ  ಸಂಸ್ಥೆಯು  2023ರಲ್ಲಿ ಮೊದಲ ಆವೃತ್ತಿಯಲ್ಲಿ ಪ್ರಕಟಣೆಗೊಂಡ ಕವನ ಸಂಕಲನವನ್ನು ಆಹ್ವಾನಿಸಿದೆ.
ಆಸಕ್ತರು ತಮ್ಮ ಸ್ವರಚಿತ ಸ್ವತಂತ್ರ ಕವನ ಸಂಕಲನದ ಮೂರು ಪ್ರತಿಗಳನ್ನು  ಈ ಕೆಳಗಿನ ವಿಳಾಸಕ್ಕೆ ಕಳುಹಿಸ ಬಹುದು.  ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ, ಅಂಶುಮನೆ , ಬುಡ್ನಾರ್ ರಸ್ತೆ ಕುಂಜಿಬೆಟ್ಟು ಉಡುಪಿ .
ಕವನ ಸಂಕಲನಗಳ ಪ್ರತಿಗಳನ್ನು ಕಳುಹಿಸಲು ಕೊನೆಯ ದಿನಾಂಕ ಮಾರ್ಚ್ 20, 2024. ಪ್ರಶಸ್ತಿಯು ರೂಪಾಯಿ 10,000 ಗೌರವ ನಗದಿನೊಂದಿಗೆ ಪ್ರಶಸ್ತಿಪತ್ರ ಹಾಗೂ ಫಲಕವನ್ನು ಒಳಗೊಂಡಿರುತ್ತದೆ ಎಂದು ಪ್ರಶಸ್ತಿ ಸಮಿತಿಯ ಸಂಚಾಲಕಿ ಪೂರ್ಣಿಮಾ ಜನಾದ೯ನ್ ತಿಳಿಸಿರುತ್ತಾರೆ.
ಕೃತಿಗಳು ಸ್ವರಚಿತ, ಸ್ವತಂತ್ರ ಕವನ ಸಂಕಲನಗಳಾಗಿರಬೇಕು, ಅನುವಾದ, ರೂಪಾಂತರ, ಶಿಶುಪ್ರಾಸ, ಹನಿಗವನ ಇತ್ಯಾದಿ ಕೃತಿಗಳನ್ನು ಸ್ಪರ್ಧಗೆ ಪರಿಗಣಿಸಲಾಗುವುದಿಲ್ಲ.  ಹೆಚ್ಚಿನ ವಿವರಗಳಿಗೆ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸಂಚಾಲಕ ರವಿರಾಜ್ ಎಚ್. ಪಿ. 98452 40309 ಅವರನ್ನು ಸಂಪರ್ಕಿಸಬಹುದು.
 
 
 
 
 
 
 
 
 
 
 

Leave a Reply