ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ವತಿಯಿಂದ ಮುಖ್ಯಮಂತ್ರಿ, ಕಾರ್ಮಿಕ ಸಚಿವರಿಗೆ ಮನವಿ

ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ವತಿಯಿಂದ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಅವರಿಗೆ ಪ್ರತ್ಯೇಕವಾಗಿ ಮನವಿ ಸಲ್ಲಿಸಿ ಕ್ಷೇಮ ನಿಧಿಗೆ 30 ಕೋಟಿ ರೂ ಬಜೆಟ್ ನಲ್ಲಿ ಮೀಸಲಿಡಬೇಕು ಎಂದು ಒತ್ತಾಯಿಸಲಾಯಿತು.
ಪತ್ರಿಕಾ ವಿತರಕರಿಗೆ ವೈದ್ಯಕೀಯ ಸೌಲಭ್ಯ, ಕೋವಿಡ್ ಸಂದರ್ಭದಲ್ಲಿ ಮೃತಪಟ್ಟವರಿಗೆ ಪರಿಹಾರ ನೀಡುವಂತೆ ಮನವಿಯಲ್ಲಿ ಕೇಳಿಕೊಳ್ಳಲಾಗಿದ್ದು, ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳುವ ಭರವಸೆಯನ್ನು ಅವರು ನೀಡಿದ್ದಾರೆ.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (KUWJ)ದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು, IFWJ ಅಧ್ಯಕ್ಷರಾಗಿರುವ ಬಿ.ವಿ. ಮಲ್ಲಿಕಾರ್ಜುನಯ್ಯ, ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ರಾಜ್ಯಾಧ್ಯಕ್ಷ ಶಂಭುಲಿಂಗ ಮತ್ತು ಪದಾಧಿಕಾರಿಗಳು ನಿಯೋಗದಲ್ಲಿದ್ದರು.

 
 
 
 
 
 
 
 
 
 
 

Leave a Reply