ಅರಕಲಗೂಡು ತಾಲ್ಲೂಕು ಪತ್ರಕರ್ತನ ಕುಟುಂಬಕ್ಕೆ ಪರಿಹಾರ ಮಂಜೂರು

ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(KUWJ)ದ ಮನವಿ ಮೇರೆಗೆ ಅರಕಲಗೂಡು ತಾಲ್ಲೂಕಿನ ಬಸವಾಪಟ್ಟಣದ ಸಂಯುಕ್ತ‌ ಕರ್ನಾಟಕ ಪತ್ರಿಕೆಯ ಜಯಕುಮಾರ್‌.ಬಿ.ಸಿ. ಅವರಿಗೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎಪ್ಪತ್ತೈದು ಸಾವಿರ ರೂ ಪರಿಹಾರ ಮಂಜೂರು ಮಾಡಿದ್ದಾರೆ.

ಪತ್ರಕರ್ತ ಜಯಕುಮಾರ್ ಅವರ ಹೃದಯ ಚಿಕಿತ್ಸೆಗಾಗಿ ಎರಡು ಲಕ್ಷಕ್ಕೂ ಹೆಚ್ಚು ಖರ್ಚು ಮಾಡಿಕೊಂಡಿದ್ದರು. ಅವರು ಸಂಕಷ್ಟದಲ್ಲಿರುವ ಬಗ್ಗೆ ಹಾಸನ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ, ರಾಜ್ಯ ಸಂಘದ ಗಮನಕ್ಕೆ ತಂದಿತ್ತು.

ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ಮನವಿ ಮೇರೆಗೆ, ಸಿಎಂ ಬಸವರಾಜ ಬೊಮ್ಮಾಯಿ ಅವರು ಪರಿಹಾರ ಮಂಜೂರು ಮಾಡಿದ್ದಾರೆ.

ಪರಿಹಾರ ಮಂಜೂರು ಮಾಡಲು ಆದೇಶಿಸಿದ ಮುಖ್ಯಮಂತ್ರಿ ಅವರಿಗೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (KUWJ)ದ ಕೃತಜ್ಞತೆಗಳು

 
 
 
 
 
 
 
 
 
 
 

Leave a Reply