ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆ ಈಡೇರಿಸುವ ಭರವಸೆ

ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳನ್ನು ಶೀಘ್ರವೇ ಈಡೇರಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ ನೀಡಿದರು.

ಆರೋಗ್ಯ ಇಲಾಖೆಯ ಇ-ಸರ್ವೇ ಕೆಲಸದಿಂದ ಕೈಬಿಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ನಿಯೋಗ ಸಚಿವೆ ಹೆಬ್ಬಾಳ್ಕರ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು.

ಇದೇ ವೇಳೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಈ ಕುರಿತು ಆರೋಗ್ಯ ಸಚಿವರೊಂದಿಗೆ ಮಾತುಕತೆ ನಡೆಸುವುದಾಗಿ ನಿಯೋಗಕ್ಕೆ ಭರವಸೆ ನೀಡಿದರು. ಸಮಸ್ಯೆಗೆ ಶೀಘ್ರವೇ ಪರಿಹಾರ ನೀಡಲಾಗುವುದು ಎಂದರು.

ಅಂಗನವಾಡಿ ಕಾರ್ಯಕರ್ತೆಯರ ಸಂಘದ ರಾಜ್ಯಾಧ್ಯಕ್ಷೆ ಅಮ್ಜದ್, ಪ್ರಧಾನ ಕಾರ್ಯದರ್ಶಿ ಜಯಮ್ಮ, ಬೆಂಗಳೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಿರಿಜ ಇದ್ದರು

 
 
 
 
 
 
 
 
 
 
 

Leave a Reply