ಉಡುಪಿ: ಕಾಲೇಜು ಶಿಕ್ಷಣ ಇಲಾಖೆ ವತಿಯಿಂದ ಪದವಿ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್ ಪಿ ಸಿ ವಿತರಣಾ ಕಾರ್ಯಕ್ರಮ

ಉಡುಪಿ: ಕರ್ನಾಟಕ ಸರಕಾರದ ಕಾಲೇಜು ಶಿಕ್ಷಣ ಇಲಾಖೆ ವತಿಯಿಂದ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಮತ್ತು ಡಾ ಜಿ ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಇದರ ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್ ಪಿ ಸಿ ವಿತರಣಾ ಕಾರ್ಯಕ್ರಮ ಹಾಗೂ ಸ್ಮಾರ್ಟ್ ಕ್ಲಾಸ್ ರೂಮ್ ಉದ್ಘಾಟನಾ ಸಮಾರಂಭ ನಡೆಯಿತು.

ಮುಖ್ಯ ಅತಿಥಿಯಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷ ಯಶ್ ಪಾಲ್ ಸುವರ್ಣ ಭಾಗವಹಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಕೆ ರಘುಪತಿ ಭಟ್ ಟ್ಯಾಬ್ಲೆಟ್ ಪಿಸಿ ಗಳನ್ನು ವಿತರಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ಬಾಲಕೃಷ್ಣ ಹೆಗ್ಡೆ, ಶ್ರೀ ಭಾಸ್ಕರ ಶೆಟ್ಟಿ, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ ರೋಷನ್ ಶೆಟ್ಟಿ ಹಾಗೂ ಕಾಲೇಜಿನ ಉಪನ್ಯಾಸಕರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply