ಗ್ರಂಥಪಾಲಕರ ದಿನಾಚರಣೆ

ಭಾರತದ ಗ್ರಂಥಾಲಯ ವಿಜ್ಞಾನದ ಪಿತಾಮಹ ಡಾ. ಎಸ್.ಆರ್.ರಂಗನಾಥನ್ ಅವರ 131 ನೇ ಜನ್ಮ ದಿನದ ನೆನಪಿಗಾಗಿ ಪೂರ್ಣಪ್ರಜ್ಞ ಇನ್‍ಸ್ಟಿಟ್ಯೂಟ್ ಆಫ್ ಮ್ಯಾನೇಜ್‍ಮೆಂಟ್‍ನಲ್ಲಿ ರಾಷ್ಟ್ರಿಯ ಗ್ರಂಥಪಾಲಕರ ದಿನವನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಸಾರ್ವಜನಿಕ ಗ್ರಂಥಾಲಯ ಇಲಾಖೆ, ಉಡುಪಿಯ ಮುಖ್ಯ ಗ್ರಂಥಾಲಯ ಅಧಿಕಾರಿ ನಳಿನಿ ಜಿ.ಐ. ಮಾತನಾಡಿ, ಇಂದಿನ ಡಿಜಿಟಲ್ ಜಗತ್ತಿನಲ್ಲಿ ಇ-ಸಂಪನ್ಮೂಲಗಳ ಪ್ರಾಮುಖ್ಯತೆಯನ್ನು ಅವರು ಎತ್ತಿ ತೋರಿಸಿದರು. ಗ್ರಂಥಾಲಯದ ಬಳಕೆದಾರರ ವಿವಿಧ ಅವಶ್ಯಕತೆಗಳನ್ನು ಪೂರೈಸಲು ಗ್ರಂಥಾಲಯದಲ್ಲಿರುವ ಭೌತಿಕ ಸಂಪನ್ಮೂಲಗಳು ಮತ್ತು ಇ-ಸಂಪನ್ಮೂಲಗಳ ನಡುವೆ ಗ್ರಂಥಪಾಲಕರು ಹೇಗೆ ಸಮತೋಲನವನ್ನು ಹೊಂದಿದ್ದಾರೆ ಎಂಬುದನ್ನು ಅವರು ಒತ್ತಿ ಹೇಳಿದರು.

ಸಂಸ್ಥೆಯ ನಿರ್ದೇಶಕರಾದ ಡಾ. ಭರತ್ ವಿ ಅವರು ಗ್ರಂಥಾಲಯದಲ್ಲಿ ಒದಗಿಸಲಾದ ಎಲ್ಲಾ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಲು ವಿದ್ಯಾರ್ಥಿಗಳನ್ನು ಪ್ರೇರೇಪಿಸಿದರು ಮತ್ತು ಓದುವ ಹವ್ಯಾಸವನ್ನು ಬೆಳೆಸಲು ಒತ್ತು ನೀಡಿದರು.

ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಗ್ರಂಥಪಾಲಕಿಯಾದ ರಂಜಿತ ಸಿ ಪೂರ್ಣಪ್ರಜ್ಞ ಸಂಶೋಧನಾ ಮತ್ತುಅಭಿವೃದ್ಧಿ ಕೇಂದ್ರದ ನಿರ್ದೇಶಕರಾದ ಡಾ. ಕೃಷ್ಣ ಕೊತಾಯ ಅವರು ವಿಶೇಷ ಅಭ್ಯಗತರಾಗಿ ಭಾಗವಹಿಸಿದ್ದರು.

ಸಂಸ್ಥೆಯ ಗ್ರಂಥಪಾಲ ಪುರುಷೋತ್ತಮ್ ಸ್ವಾಗತಿಸಿದರು ಮತ್ತು ಪ್ರಥಮ ಎಂಬಿಎಯ ವಿದ್ಯಾರ್ಥಿನಿಯರಾದ ಪ್ರೀತಿ ನಾಯಕ್ ವಂದಿಸಿ, ನವ್ಯ ಪ್ರಭು ಕಾರ್ಯಕ್ರಮ ನಿರ್ವಹಿಸಿದರು. ಗ್ರಂಥಾಲಯ ಸಮಿತಿಯ ಸಂಯೋಜಕಿ ಸುಜಾತ ಜಿ ಎಲ್ ಕಾರ್ಯಕ್ರಮವನ್ನು ಆಯೋಜಿಸಿದ್ದರು.

 
 
 
 
 
 
 
 
 
 
 

Leave a Reply