ಉಡುಪಿಯ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ~ ವಿಶೇಷ ವಸಂತೋತ್ಸವ ಪೂಜೆ

ಉಡುಪಿಯ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ತಾರೀಕು 30-05-2022 ಸೋಮವಾರ ರಾತ್ರಿ ವಸಂತ ಋತು ವೈಶಾಖ ಮಾಸ ಅಮಾವಾಸ್ಯೆಯಂದು ಸ್ವಯಂಸೇವಕರು ಹಾಗೂ ಜಿ ಎಸ್ ಬಿ ಯುವಕ ಮಂಡಳಿಯ ಆಶ್ರಯದಲ್ಲಿ ವಿಶೇಷ ವಸಂತೋತ್ಸವ ಪೂಜೆಯು ವಿಜೃಂಭಣೆಯಿಂದ ನಡೆಯಿತು.

ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀ ವಿನಾಯಕ್ ಭಟ್, ದೇವಸ್ಥಾನದ ಆಡಳಿತ ಮೊಕ್ತೇಸರಾದ ಶ್ರೀ ಪಿ ವಿ ಶೆಣೈ ಮತ್ತು ಜಿ.ಎಸ್.ಬಿ ಯುವಕ ಮಂಡಳಿಯ ಅಧ್ಯಕ್ಷರಾದ ಶ್ರೀ ನಿತೇಶ್ ಶೆಣೈ, ಪದಾಧಿಕಾರಿಗಳು, ಸದಸ್ಯರು, ಸ್ವಯಂಸೇವಕರು ಹಾಗೂ ನೂರಾರು ಭಕ್ತರು ಭಾಗವಹಿಸಿದರು.

 
 
 
 
 
 
 
 
 

Leave a Reply