ಮಾಬುಕಳ- ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆವತಿಯಿಂದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಕೋಟ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬ್ರಹ್ಮಾವರ ಜನಜಾಗೃತಿ ಕಾರ್ಯಕ್ರಮದಡಿಯಲ್ಲಿ ಚೇತನಾ ಪ್ರೌಢಶಾಲೆ ಮಾಬುಕಳದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ತಾಲೂಕು ಜನಜಾಗೃತಿ ಅಧ್ಯಕ್ಷ ಅಚ್ಯುತ್ ಪೂಜಾರಿ ಉದ್ಘಾಟಿಸಿ ಶುಭ ಹಾರೈಸಿದರು. 

ಸಂಪನ್ಮೂಲ ವ್ಯಕ್ತಿಗಳಾಗಿ ಸರ್ಕಾರಿ ಪದವಿ ಪೂರ್ವ ಕಾಲೇಜು ಬ್ರಹ್ಮಾವರದ ಸಹ ಶಿಕ್ಷಕ ಶಶಿಧರ್ ಶೆಟ್ಟಿ ದುಶ್ಚಟಗಳ ಬಗ್ಗೆ, ದುಶ್ಚಟಗಳು ಇರುವ ಮಕ್ಕಳಿಗೆ ಆರೋಗ್ಯದಲ್ಲಿ ಆಗುವ ಸಮಸ್ಯೆಗಳ ಬಗ್ಗೆ, ಅವರಿಂದ ಸಮಾಜದಲ್ಲಿ ಆಗುವ ತೊಂದರೆಗಳ ಬಗ್ಗೆ ತಿಳಿಸಿ ಮುಂದಿನ ದಿನಗಳಲ್ಲಿ ದುಶ್ಚಟಗಳಿಂದ ದೂರವಿರುವಂತೆ ವಿದ್ಯಾರ್ಥಿಗಳಿಗೆ ಸಂಕಲ್ಪ ಮಾಡಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚೇತನ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಗಣೇಶ್ ಜಿ ವಹಿಸಿದ್ದರು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜನಜಾಗೃತಿ ವೇದಿಕೆ ಪಾಂಡೇಶ್ವರ ವಲಯ ಸದಸ್ಯ ಪ್ರತಾಪ್ ಶೆಟ್ಟಿ, ಬಿ ಡಿ ಶೆಟ್ಟಿ ಕಾಲೇಜು ಮಾಬುಕಳದ ಪ್ರಾಂಶುಪಾಲ ಬಾಲಕೃಷ್ಣ ಶೆಟ್ಟಿ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ತಾಲೂಕು ಜ್ಞಾನವಿಕಾಸ ಸಮನ್ವಯಾಧಿಕಾರಿ ನೇತ್ರಾವತಿ ನಿರೂಪಿಸಿ, ಸೇವಾಪ್ರತಿನಿಧಿ ಚಂದ್ರಕಲಾ ಸ್ವಾಗತಿಸಿ ವಂದಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬ್ರಹ್ಮಾವರ ಜನಜಾಗೃತಿ ಕಾರ್ಯಕ್ರಮದಡಿಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ತಾಲೂಕು ಜನಜಾಗೃತಿ ಅಧ್ಯಕ್ಷ ಅಚ್ಯುತ್ ಪೂಜಾರಿ ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಯಾಗಿ ಜನಜಾಗೃತಿ ವೇದಿಕೆ ಪಾಂಡೇಶ್ವರ ವಲಯ ಸದಸ್ಯ ಪ್ರತಾಪ್ ಶೆಟ್ಟಿ, ಬಿ ಡಿ ಶೆಟ್ಟಿ ಕಾಲೇಜು ಮಾಬುಕಳದ ಪ್ರಾಂಶುಪಾಲ ಬಾಲಕೃಷ್ಣ ಶೆಟ್ಟಿ ಉಪಸ್ಥಿತರಿದ್ದರು.,

 
 
 
 
 
 
 
 
 

Leave a Reply