ಹಿರಿಯ ಯಕ್ಷಗಾನ ಕಲಾವಿದ ಪೇತ್ರಿ ಮಾಧವ ನಾಯ್ಕ ನಿಧನ

ಬಡಗುತಿಟ್ಟಿನ ಬಣ್ಣದ ವೇಷ ಹಾಗೂ ಮುಂಡಾಸು ವೇಷಕ್ಕೆ ಖ್ಯಾತಿಹೊಂದಿದ ಪೇತ್ರಿ ಮಾಧವ ನಾಯ್ಕ (84 ವರ್ಷ) ಪೇತ್ರಿಯ ಸ್ವಗೃದಲ್ಲಿ 05.06.2024ರಂದು ನಿಧನರಾದರು. ಮಾರಣಕಟ್ಟೆ, ಮಂದಾರ್ತಿ, ಪೆರ್ಡೂರು, ಸಾಲಿಗ್ರಾಮ, ಅಮೃತೇಶ್ವರೀ, ಕೊಲ್ಲೂರು ಹಾಗೂ ಮುಲ್ಕಿ ಮೇಳಗಳಲ್ಲಿ 23 ವರ್ಷಗಳ ಕಾಲ ಮತ್ತು ಡಾ. ಶಿವರಾಮ ಕಾರಂತರ ನೇತೃತ್ವದ ಯಕ್ಷರಂಗದಲ್ಲಿ 30 ವರ್ಷಗಳ ಕಾಲ ವೇಷಧಾರಿಯಾಗಿ ಕಲಾ ಪ್ರತಿಭೆಯನ್ನು ಮೆರೆದಿದ್ದರು. ಯಕ್ಷರಂಗದ ಪ್ರಮುಖ ವೇಷಧಾರಿಯಾಗಿ ವಿವಿಧ ದೇಶಗಳನ್ನು ಸಂಚರಿಸಿದ್ದರು.ಬಣ್ಣದ ವೇಷಕ್ಕೆ ವಿಶೇಷ ಕೊಡುಗೆಯನ್ನು ನೀಡಿದ ಮಾಧವ ನಾಯ್ಕರು ರಾವಣ, ಘಟೋತ್ಕಚ, ಹಿಡಿಂಬಾಸುರ, ತಾರಾಕಾಸುರ, ಶೂರ್ಪನಖೆ, ಹಿಡಿಂಬೆ, ಲಂಕಿಣಿ, ವೃತ್ರಜ್ವಾಲೆ ಹೀಗೆ ಗಂಡು ಬಣ್ಣ ಮತ್ತು ಹೆಣ್ಣು ಬಣ್ಣ ಎರಡರಲ್ಲೂ ನೈಪುಣ್ಯತೆ ಹೊಂದಿದ್ದರು.ಇವರಿಗೆ ಕರ್ನಾಟಕ ರಾಜ್ಯೋತ್ಸವ, ಯಕ್ಷಗಾನ ಅಕಾಡೆಮಿ, ಯಕ್ಷಗಾನ ಕಲಾರಂಗದ ಹೀಗೆ ಹಲವು ಪ್ರಶಸ್ತಿಗಳು ಸಂದಿವೆ.ಕಳೆದ ವಾರ ಮಂದಾರ್ತಿ ಮೇಳದ ಸೇವೆಯಾಟದ ದಿನ 1ಲಕ್ಷ ಮೊತ್ತದ ಪ್ರತಿಷ್ಠಿತ ಹಾರಾಡಿ ರಾಮಗಾಣಿಗ ಪ್ರಶಸ್ತಿ ಪ್ರಾಪ್ತಿಯಾಗಿತ್ತು. ಪತ್ನಿ, ಓರ್ವ ಪುತ್ರಿ, ಐವರು ಪುತ್ರರು ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ತೀವ್ರ ಸಂತಾಪ ವ್ಯಕ್ತ ಪಡಿಸಿದ್ದಾರೆ.

 
 
 
 
 
 
 
 
 
 
 

Leave a Reply