ಬಂಟರ ಸಂಘದಿಂದ ಕ್ರೀಡಾಪಟು ಮಾಧುರ್ಯಾ ಶೆಟ್ಟಿಗೆ ಸಹಾಯಧನ

ಉಡುಪಿ: ಅಂತರಾಷ್ಟ್ರೀಯ ಮಟ್ಟದ ಕ್ರಿಡಾಕೂಟಕ್ಕೆ ಆಯ್ಕೆಯಾಗಿರುವ ಉಡುಪಿ ಜಿಲ್ಲೆಯ ಗ್ರಾಮೀಣ ಪ್ರತಿಭೆ ಮಾಧುರ್ಯಾ ಶೆಟ್ಟಿ ಇವರಿಗೆ ಫ್ರಾನ್ಸ್ ನಲ್ಲಿ ನಡೆಯಲಿರುವ ಕ್ರೀಡಾಕೂಟಕ್ಕೆ ಭಾಗವಹಿಸುವ ನಿಟ್ಟಿನಲ್ಲಿ ಬಂಟರ ಸಂಘದ ವತಿಯಿಂದ ಧನ ಸಹಾಯ ವಿತರಣಾ ಕಾರ್ಯಕ್ರಮವು ಉಡುಪಿ ಜಿಲ್ಲಾ ಕ್ರಿಡಾಂಗಣದಲ್ಲಿ ನಡೆಯಿತು.

ಈ ಸಂಧರ್ಭದಲ್ಲಿ ಮಾತನಾಡಿದ ಉಡುಪಿ ಜಿಲ್ಲಾ ಬಂಟರ ಸಂಘದ ಗೌರವಧ್ಯಕ್ಷರಾದ ಜಯಕರ ಶೆಟ್ಟಿ ಇಂದ್ರಾಳಿ ಮಾತನಾಡಿ “ಮಾಧುರ್ಯ ಶೆಟ್ಟಿ ಅಪ್ಪಟ ಗ್ರಾಮೀಣ ಪ್ರತಿಭೆಯಾಗಿದ್ದರೂ ಸಹ ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುವುದು ನಮಗೆಲ್ಲರಿಗೂ ಹೆಮ್ಮೆಯ ವಿಚಾರ. ಅವರು ತಮ್ಮ ಸ್ವಂತ ಶ್ರಮದಿಂದ ಈ ಮಟ್ಟಕ್ಕೆ ಬೆಳೆದಿದ್ದಾರೆ‌. ವಿದ್ಯಾರ್ಥಿಗಳು ನಿರಂತರವಾಗಿ ತಮ್ಮ ಪ್ರಯತ್ನವನ್ನು ಮಾಡುತ್ತಲೇ ಇರಬೇಕು. ಮಾಧುರ್ಯ ಳಿಗೆ ಶಾಲೆಯ ಅಧ್ಯಾಪಜರು ಮತ್ತು ಮುಖ್ಯೋಪಾಧ್ಯಾಯರು ತುಂಬಾ ಸಹಕಾರವನ್ನು ನೀಡಿದ್ದಾರೆ ಅವರಿಗೂ ಅಭಿನಂಧನೆಗಳು. ಉಡುಪಿಯ ಕ್ರೀಡಾ ತರಬೇತುದಾರರು ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ ಅವರಿಗೆ ಸೂಕ್ತ ತರಬೇತಿಯನ್ನು ನೀಡಿ ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡಲು ಸಂಪೂರ್ಣ ಸಹಕಾರ ನೀಡುತಿದ್ದಾರೆ” ಎಂದರು.

ಈ ಸಂಧರ್ಭದಲ್ಲಿ ಜಾಗತಿಕ ಬಂಟರ ಸಂಘದ ವತಿಯಿಂದ ೫೦ ಸಾವಿರ ರುಪಾಯಿ, ಮತ್ತು ಉಡುಪಿ ಬಂಟರ ಸಂಘದಿಂದ ೨೫ ಸಾವಿರ ರುಪಾಯಿಗಳನ್ನು ಕ್ರೀಡಾಪಟು ಮಾಧುರ್ಯ ಶೆಟ್ಟಿ ಯವರಿಗೆ ಹಸ್ತಾಂತರಿಸಲಾಯಿತು.

ಕಾರ್ಯಕ್ರಮದಲ್ಲಿ ಉಡುಪಿ ಬಂಟರ ಸಂಘದ ಅಧ್ಯಕ್ಷರಾದ ಪುರುಷೋತ್ತಮ ಶೆಟ್ಟಿ, ಕಾರ್ಯದರ್ಶಿ ಅಮಿತ್ ಕುಮಾರ್ ಶೆಟ್ಟಿ, ಕೋಶಾಧಿಕಾರಿ ಮನೋಹರ್ ಶೆಟ್ಟಿ ತೋನ್ಸೆ, ಉಪಾಧ್ಯಕ್ಷರಾದ ಮೋಹನ್ ಶೆಟ್ಟಿ ಉಡುಪಿ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾಕ್ಟರ್ ರೋಶನ್ ಕುಮಾರ್ ಶೆಟ್ಟಿ, ಮುಖ್ಯೋಪಾಧ್ಯಾಯ ರಾದ ಲಿಂಗರಾಜು ಮತ್ತಿತರರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply