ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್‌ಗೆ ಸತತ 6ನೇ ಬಾರಿಗೆ ಸಾಧನಾ ಪ್ರಶಸ್ತಿ

ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ನಿ. ಉಡುಪಿ ಇದರ 2021-22ನೇ ಸಾಲಿನ ಸರ್ವತೋಮುಖ ಅಭಿವೃದ್ಧಿಗಾಗಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಿ೦ದ ನೀಡಲ್ಪಡುವ ಸಾಧನಾ ಪ್ರಶಸ್ತಿ ಸತತ 6ನೇ ಬಾರಿಗೆ ಲಭಿಸಿದೆ.

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಡಾ| ಎಂ . ಎನ್. ರಾಜೇಂದ್ರ ಕುಮಾರ್ ರವರಿಂದ ಬ್ಯಾಂಕಿನ ಬ್ಯಾಂಕಿ೦ಗ್ ಅಧ್ಯಕ್ಷರಾದ ಶ್ರೀ ಯಶ್‌ಪಾಲ್ ಎ. ಸುವರ್ಣ ಹಾಗೂ ಪ್ರಧಾನ ವ್ಯವಸ್ಥಾಪನಾ ನಿರ್ದೇಶಕರಾದ ಶ್ರೀ ಜಗದೀಶ್ ಮೊಗವೀರ ಪ್ರಶಸ್ತಿಯನ್ನು ಸ್ವೀಕರಿಸಿದರು.

ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಶ್ರೀ ಯಶ್‌ಪಾಲ್ ಸುವರ್ಣ ರವರ ಅಧ್ಯಕ್ಷತೆಯಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 8ಶಾಖೆಗಳ ಮೂಲಕ ವ್ಯವಹಾರ ನಡೆಸುತ್ತಿದ್ದು, ಕಳೆದ 12 ವರ್ಷಗಳಿಂದ ನಿರಂತರವಾಗಿ ಸದಸ್ಯರಿಗೆ 18% ಡಿವಿಡೆಂಡ್ ನೀಡುವ ಮೂಲಕ ಕರಾವಳಿ ಭಾಗದ ಅತೀ ಹೆಚ್ಚು ಡಿವಿಡೆಂಡ್ ನೀಡುವ ಅಗ್ರಗಣ್ಯ ಪಟ್ಟಣ ಸಹಕಾರಿ ಬ್ಯಾಂಕ್ ಎಂಬ ಹೆಗ್ಗಳಿಕೆ ಪಾತ್ರವಾಗಿದೆ.

ಆಧುನಿಕ ಬ್ಯಾಂಕಿ೦ಗ್ ವ್ಯವಸ್ಥೆಯೊಂದಿಗೆ ಸುಸಜ್ಜಿತ ಶಾಖೆಗಳ ಮೂಲಕ ಗ್ರಾಹಕ ಸ್ನೇಹಿಯಾಗಿ ವ್ಯವಹಾರ ನಡೆಸುತ್ತಾ ಸರ್ವಾಂಗೀಣ ಪ್ರಗತಿ ಸಾಧಿಸಿದ್ದು ಬ್ಯಾಂಕಿನ ಕಾರ್ಯವೈಖರಿಗೆ ಈ ಬಾರಿಯ ಪ್ರತಿಷ್ಟಿತ ಸಾಧನಾ ಪ್ರಶಸ್ತಿಯ ಮೂಲಕ ಗೌರವಿಸಲಾಗಿದೆ.

 
 
 
 
 
 
 
 
 
 
 

Leave a Reply