ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ವತಿಯಿಂದ ವಿಮಾ ಪ್ರಬಂಧಕಿಗೆ ಅಭಿನಂದನೆ 

ಮಹಾಲಕ್ಷ್ಮೀ  ಕೋ ಆಪರೇಟಿವ್ ಬ್ಯಾಂಕ್ ವತಿಯಿಂದ ನ್ಯಾಷನಲ್ ಇನ್ಸೂರೆನ್ಸ್  ಪ್ರಬಂಧಕರಿಗೆ ಅಭಿನಂದನೆ 
ಸುವರ್ಣ ತ್ರಿಭುಜ ಬೋಟ್ ದುರಂತ ಪ್ರಕರಣದಲ್ಲಿ ರೂ. 40,00,000-00 ವಿಮಾ ಪರಿಹಾರ ಮೊತ್ತವನ್ನು ಮಂಜೂರು ಮಾಡುವಲ್ಲಿ ವಿಶೇಷ ಮುತುವರ್ಜಿ ವಹಿಸಿದ ನ್ಯಾಷನಲ್  ಇನ್ಸೂರೆನ್ಸ್ ಹಿರಿಯ ವಿಭಾಗೀಯ ಪ್ರಬಂಧಕರಾದ ಶ್ರೀಮತಿ ಪ್ರತಿಭಾ ಶೆಟ್ಟಿಯವರನ್ನು ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ವತಿಯಿಂದ ಆಧ್ಯಕ್ಷ ಶ್ರೀ ಯಶ್‌ಪಾಲ್ ಸುವರ್ಣ ಸನ್ಮಾನಿಸಿ ಅಭಿನಂದಿಸಲಾಯಿತು.
ಅಭಿನಂದನೆ ಸ್ವೀಕರಿಸಿದ ಪ್ರತಿಭಾ ಶೆಟ್ಟಿಯವರು ವಿಮಾ ಪರಿಹಾರ ಮಂಜೂರಾತಿ ಪ್ರಕ್ರಿಯೆಯಲ್ಲಿ ಮಹಾಲಕ್ಷ್ಮೀ ಬ್ಯಾಂಕ್ ಹಾಗೂ ಮೀನುಗಾರರ ಸಂಘದ ಪೂರಕ ಸಹಕಾರದಿಂದ ಈ ಗರಿಷ್ಠ ಮೊತ್ತ ಪರಿಹಾರ ನೀಡಲು ಸಾಧ್ಯವಾಯಿತು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಯಶ್‌ಪಾಲ್ ಸುವರ್ಣ, ಸುವರ್ಣ ತ್ರಿಭುಜ ಬೋಟ್ ವಿಮಾ ಪರಿಹಾರ  ಮಂಜೂರಾತಿಯಿಂದ ಬ್ಯಾಂಕ್ ಒದಗಿಸಿದ್ದ ಬೋಟಿನ ಸಾಲ ಮರುಪಾವತಿಗೆ ಅನುಕೂಲವಾಯಿತು. ವಿಮಾ ಪರಿಹಾರ ಮಂಜೂರಾತಿಗೆ ಎದುರಾದ ತಾಂತ್ರಿಕ ಸಮಸ್ಯೆಗಳನ್ನು ಪರಿಹರಿಸಲು ಸಹಕರಿಸಿದ ಕೇಂದ್ರ ಸಚಿವರಾದ ಶ್ರೀಮತಿ ನಿರ್ಮಲ ಸೀತರಾಮನ್ , ಶ್ರೀ ರಾಜನಾಥ ಸಿಂಗ್, ಸಂಸದರಾದ ಶೋಭಾ ಕರಂದ್ಲಾಜೆ, ಶಾಸಕರಾದ ಶ್ರೀ ಕೆ. ರಘುಪತಿ ಭಟ್, ಮಲ್ಪೆ ಮೀನುಗಾರರ ಸಂಘ ಹಾಗೂ ನ್ಯಾಷನಲ್ ಇನ್ಸೂರೆನ್ಸ್ ಕಂಪೆನಿಯ ಸಿಬ್ಬಂದಿಗಳಿಗೆ ಬ್ಯಾಂಕಿನ ವತಿಯಿಂದ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.
 
 
 
 
 
 
 
 
 
 
 

Leave a Reply