ಜಯಕರ ಶೆಟ್ಟಿ ಇಂದ್ರಾಳಿಯವರ ಕಾರ್ಯವೈಖರಿ ಸರ್ವ ಸಹಕಾರಿಗಳಿಗೆ ಆದರ್ಶವಾಗಲಿ: ಯಶ್‍ಪಾಲ್ ಸುವರ್ಣ

ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ವತಿಯಂದ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ನಿರ್ದೇಶಕರಾಗಿ ಆಯ್ಕೆಯಾದ ಜಯಕರ ಶೆಟ್ಟಿ ಇಂದ್ರಾಳಿಯವರಿಗೆ ಬ್ಯಾಂಕಿನ ಅಧ್ಯಕ್ಷರಾದ ಯಶ್‍ಪಾಲ್ ಸುವರ್ಣ ರವರು ಸನ್ಮಾನಿಸಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಜಯಕರ ಶೆಟ್ಟಿಯವರು ಸಹಕಾರ ಕ್ಷೇತ್ರದ ತಮ್ಮ ವಿಶಿಷ್ಟ ಸೇವೆಯಿಂದಾಗಿ ಅರ್ಹವಾಗಿಯೇ ಈ ಹುದ್ದೆಯನ್ನು ಅಲಂಕರಿಸಿದ್ದಾರೆ, ಇವರ ಈ ಸೇವೆ ಸಹಕಾರಿ ಕ್ಷೇತ್ರದ ಸರ್ವರಿಗೂ ಆದರ್ಶವಾಗಲಿ ತಿಳಿಸಿದರು.
ಸನ್ಮಾನ ಸ್ವೀಕರಿಸಿದ ಜಯಕರ ಶಟ್ಟಿ ಇಂದ್ರಾಳಿ ಯವರು ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಗ್ರಾಹಕ ಸ್ನೇಹಿಯಾಗಿ ಸೇವೆ ಸಲ್ಲಿಸುತ್ತಿದ್ದು, ಸಹಕಾರ ಮಹಾಮಂಡಲದ ನಿರ್ದೇಶಕರಾಗಿ ಆಯ್ಕೆಯಾಗಲು ಸಹಕರಿಸಿದ ಸರ್ವರಿಗೂ ವಂದನೆ ಸಲ್ಲಿಸುವುದಾಗಿ ತಿಳಿಸಿದರು.
ಸಮಾರಂಭದಲ್ಲಿ ಅಜ್ಜರಕಾಡು ವಾರ್ಡಿನ ನಗರಸಭಾ ಸದಸ್ಯರಾದ ಶ್ರೀಮತಿ ರಶ್ಮಿ ಸಿ. ಭಟ್, ಉಡುಪಿ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶ್ರೀ ರಾಜೇಶ್ ಶೆಟ್ಟಿ, ಬ್ಯಾಂಕಿನ ನಿರ್ದೇಶಕರಾದ ಶ್ರೀ ವಿನಯ ಕರ್ಕೇರ, ಶ್ರೀ ಎನ್. ಟಿ. ಅಮೀನ್, ಶ್ರೀ ಸುರೇಶ್ ಬಿ.ಕರ್ಕೇರ, ಶ್ರೀ ಶಿವರಾಮ ಕುಂದರ್, ವೃತ್ತಿಪರ ನಿರ್ದೇಶಕರಾದ ಶ್ರೀ ಮಂಜುನಾಥ ಎಸ್. ಕೆ, ಸಲಹೆಗಾರರರಾದ ಶ್ರೀ ಆನಂದ ಪುತ್ರನ್, ಬ್ಯಾಂಕಿನ ಪ್ರಭಾರ ಪ್ರಧಾನ ವ್ಯವಸ್ಥಾಪಕಾರಾದ ಶ್ರೀ ಜಿ. ಕೆ. ಶೀನ ಉಪಸ್ಥಿತರಿದ್ದರು.
 
 
 
 
 
 
 
 
 
 
 

Leave a Reply