ಮಲಬಾರ್ ಗೋಲ್ಡ್ ವತಿಯಿಂದ ಶಿಕ್ಷಕರ ದಿನಾಚರಣೆ

ಉಡುಪಿ, ಸೆ.5: ಮನಸ್ಸುಗಳೊಂದಿಗೆ ಕೆಲಸ ಮಾಡುವ ಶಿಕ್ಷಕರು ಸಮಾಜ ಕಟ್ಟುವ ಮತ್ತು ಬೆಳೆಸುವ ಮಹತ್ತರ ಜವಾಬ್ದಾರಿ ಹೊಂದಿದ್ದಾರೆ. ಆದುದರಿಂದ ಮಕ್ಕಳಿಗೆ ಜ್ಞಾನದ ಜೊತೆ ಕೌಶಲ್ಯ ಮತ್ತು ವೌಲ್ಯವನ್ನು ಕಲಿಸುವ ಕೆಲಸವನ್ನು ಶಿಕ್ಷಕರು ಮಾಡಬೇಕಾಗಿದೆ. ಅಲ್ಲದೆ ಶಿಕ್ಷಕರಲ್ಲಿ ಅಧ್ಯಯನಶೀಲತೆ ಎಂಬುದು ಅತೀ ಮುಖ್ಯವಾಗಿರಬೇಕು ಎಂದು ಹಿರಿಯ ಚಿಂತಕ, ನಿಕಟಪೂರ್ವ ರಾಜ್ಯ ಎನ್‌ಎಸ್‌ಎಸ್ ಅಧಿಕಾರಿ ಡಾ.ಗಣನಾಥ ಎಕ್ಕಾರು ಹೇಳಿದ್ದಾರೆ.

ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ವತಿಯಿಂದ ಶಿಕ್ಷಕರ ದಿನಾಚರಣೆಯ ಅಂಗವಾಗಿ ಮಲಬಾರ್ ಗೋಲ್ಡ್‌ನಲ್ಲಿ ಮಂಗಳವಾರ ಆಯೋಜಿಸಲಾದ ಶಿಕ್ಷಕರಿಗೆ ಸನ್ಮಾನ ಹಾಗೂ ಸಂವಾದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡುತಿದ್ದರು.

ಸಮಾಜದಲ್ಲಿ ಶಿಕ್ಷಕರ ಪಾತ್ರ ಮಹತ್ವದಾಗಿದೆ. ಕಾಲ ಬದಲಾದಂತೆ ಶಿಕ್ಷಣ ಮತ್ತು ಶಿಕ್ಷಕರ ಸ್ವರೂಪ ಕೂಡ ಬದಲಾಗುತ್ತಿದೆ. ವಿದ್ಯಾರ್ಥಿಗಳನ್ನು ಸಶಕ್ತವಾಗಿ ಮುಂದಿನ ಬದುಕಿಗೆ ಸಿದ್ಧಗೊಳಿಸುವುದೇ ಶಿಕ್ಷಣದ ಕೆಲಸ. ಅದು ಸರಿಯಾದ ಜ್ಞಾನದಿಂದ ಮಾತ್ರ ಸಾಧ್ಯವಾಗುತ್ತದೆ. ಕೇವಲ ಪುಸ್ತಕ ಜ್ಞಾನ ಮಾತ್ರವಲ್ಲದೆ ಜಗತ್ತಿನ ವಿದ್ಯಾಮಾನ, ಸಾಮಾಜಿಕ, ರಾಜಕೀಯ, ಆರ್ಥಿಕ ಜ್ಞಾನ ಕೂಡ ಮುಖ್ಯ ಎಂದರು.

 
 
 
 
 
 
 
 
 
 
 

Leave a Reply