ಉಡುಪಿ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ಶಾಲಾ ವಿದ್ಯಾರ್ಥಿಗಳಿಗೆ ರೇಷನ್ ಕಿಟ್ ವಿತರಣೆ

ಕಾಪು: ಕಾಪು ತಾಲೂಕಿನ ಶ್ರೀ ರಾಮ ಪ್ರಾಥಮಿಕ ಶಾಲೆ ಮಜೂರು-ಕರಂದಾಡಿ ಶಾಲಾ ಮಕ್ಕಳಿಗೆ ಉಡುಪಿ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಸಂಸ್ಥೆಯ ವತಿಯಿಂದ 50 ವಿದ್ಯಾರ್ಥಿಗಳ ಪೋಷಕರಿಗೆ ರೇಷನ್ ಕಿಟ್ ವಿತರಿಸಲಾಯಿತು,ಜಿಲ್ಲಾದ್ಯಂತ ಈ ವರೆಗೆ 5320 ಕಿಟ್ ಗಳನ್ನು ನೀಡಲಾಗಿದೆ.

ಶ್ರೀ ರಾಮ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಲೀಲಾದರ್ ಶೆಟ್ಟಿ ಮಾತನಾಡಿ ಈ ಸಮಯದಲ್ಲಿ ಫುಡ್ ಕಿಟ್ ನೀಡಿದ ಮಲಬಾರ್ ಗೋಲ್ಡ್ ಸಂಸ್ಥೆಯ ಸಾಮಾಜಿಕ ಕಳಕಳಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ನ ಶಾಖಾ ಮುಖ್ಯಸ್ಥ ಹಫೀಝ್ ರೆಹಮಾನ್ ಮಾತನಾಡಿ ಸಂಸ್ಥೆಯಲ್ಲಿ ಸಿಗುವ ಸೌಲಭ್ಯಗಳ ಬಗ್ಗೆ ವಿವರಿಸಿ ಇದರ ಸದುಪಯೋಗ ಪಡೆಯಲು ಕರೆ ನೀಡಿದರು.ಸಮಾಜ ಸೇವಾ ಸಮಿತಿ ಕಳತ್ತೂರು (ರಿ)ಅಧ್ಯಕ್ಷ ಫಾರೂಕ್ ಚಂದ್ರನಗರ ಹಾಗೂ ಸಂಚಾಲಕ ದಿವಾಕರ ಡಿ ಶೆಟ್ಟಿ ಕಳತ್ತೂರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಕಾರ್ಯಕ್ರಮವನ್ನು ಶಾಲೆಯ ಮಾಜಿ ಮುಖ್ಯೊಧ್ಯಾಪಯ ನಿರ್ಮಾಲ್ ಕುಮಾರ್ ಹೆಗ್ಡೆ ನಿರೂಪಿಸಿ, ಶಶಿಶೇಖರ್ ಭಟ್ ವಂದಿಸಿದರು.ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ಪದ್ಮನಾಭ ಶಾನುಭಾಗ್,ಶಾಲಾ ಮುಖ್ಯ ಶಿಕ್ಷಕ ಆರ್. ಎಸ್. ಕಲ್ಲೂರ,ಕಾರ್ಯದರ್ಶಿ ನಾಗಭೂಷಣ್ ರಾವ್, ಶರ್ಫುದ್ದಿನ್ ಶೇಖ್,ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ನ ಜಿ.ಆರ್.ಎಂ ರಾಘವೇಂದ್ರ ನಾಯಕ್ ಹಾಗೂ ಚಾರಿಟಿ ಉಸ್ತುವಾರಿ ತಂಝೀಮ್ ಶಿರ್ವ ಹಾಗೂ ಶಾಲೆಯ ಸಿಬ್ಬಂದಿ ವರ್ಗದವರು,ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply