ಪೌರ ಕಾರ್ಮಿಕರಿಗೆ ಮನೆ ನಿರ್ಮಾಣ – ಶಾಸಕ ಕಾಮತ್

ಮಂಗಳೂರು : ಜೆಪ್ಪು ಮಹಾಕಾಳಿ ಪಡ್ಪುವಿನಲ್ಲಿ ಕುಸಿಯುವ ಭೀತಿಯಲ್ಲಿರುವ ಪೌರ ಕಾರ್ಮಿಕರ ವಸತಿ ಸಮುಚ್ಚಯಕ್ಕೆ ಶಾಸಕ ವೇದವ್ಯಾಸ್ ಕಾಮತ್ ಹಾಗೂ ಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. 

ಈ ಬಗ್ಗೆ ಮಾತನಾಡಿದ ಶಾಸಕ ಕಾಮತ್, ಬಿರುಕು ಬಿಟ್ಟುರುವ ಕಟ್ಟಡದಲ್ಲಿರುವ‌ ಕುಟುಂಬಗಳನ್ನು ಪಕ್ಕದ ಕಟ್ಟಡಕ್ಕೆ ಸ್ಥಳಾಂತರಿಸಲಾಗಿದೆ. ಈ ಕಟ್ಟಡವನ್ನು ಕೆಡವಿ 3.60 ಕೋಟಿ ವೆಚ್ಚದಲ್ಲಿ ಹೊಸದಾಗಿ ಕಟ್ಟಡ ನಿರ್ಮಿಸಲಾಗುವುದು ಎಂದರು.ಈಗಾಗಲೇ ಈ ಕಟ್ಟಡ ನಿರ್ಮಾಣಕ್ಕಾಗಿ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯ ಪೌರ ಕಾರ್ಮಿಕರಿಗೆ ಸಂಬಂಧಪಟ್ಟ ಅನುದಾನ ಮಂಜೂರುಗೊಳಿಸಲಾಗಿದೆ. 3.60 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣ ಮಾಡಲಾಗುವುದು ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ.

ಸ್ಥಳೀಯ ಕಾರ್ಪೋರೇಟರ್ ಶೈಲೇಶ್ ಶೆಟ್ಟಿ ಅತ್ತಾವರ, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ಬಿಜೆಪಿ ಮುಖಂಡ ವಸಂತ್ ಜೆ ಪೂಜಾರಿ, ಮುತಾಲಿಬ್, ಪ್ರಮೋದ್ ಕೊಟ್ಟಾರಿ, ಪುಷ್ಪರಾಜ್ ಮುಂತಾದವರು ಉಪಸ್ಥಿತರಿದ್ದರು

 
 
 
 
 
 
 
 
 
 
 

Leave a Reply