ಮಂಗಳೂರು ಮಹಾನಗರ ಪಾಲಿಕೆಯ ಪೋರ್ಟ್ ವಾರ್ಡಿನಲ್ಲಿ 1 ಕೋಟಿ ರೂಪಾಯಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು.
ಈ ವೇಳೆ ಮಾತನಾಡಿದ ಅವರು, ಪೋರ್ಟ್ ವಾರ್ಡಿನ ಸುಭಾಷ್ ನಗರದ 1ನೇ ಮುಖ್ಯರಸ್ತೆಯಿಂದ ಹೈೂಗೆಬಜಾರ್ ಸಂಪರ್ಕಿಸುವ ರಸ್ತೆಯಲ್ಲಿ ಚರಂಡಿ ವ್ಯವಸ್ಥೆ, ರಸ್ತೆ ಅಭಿವೃದ್ಧಿ ಹಾಗೂ ಸತ್ಯನಾರಾಯಣ ಭವನ ಮಂದಿರ ತನಕ ರಸ್ತೆಯ ಅಭಿವೃದ್ಧಿಗೆ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯಡಿ 1 ಕೋಟಿ ಅನುದಾನ ಬಿಡುಗಡೆಗೊಳಿಸಲಾಗಿದೆ ಎಂದು ಹೇಳಿದರು.
ನಗರದ ಎಲ್ಲಾ ಕಡೆಗಳಲ್ಲೂ ಅಭಿವೃದ್ಧಿ ಕಾರ್ಯಗಳು ಭರದಿಂದ ಸಾಗುತ್ತಿದೆ. ಪೋರ್ಟ್ ವಾರ್ಡಿನ ಪ್ರಮುಖ ಬೇಡಿಕೆಗಳಿಗೆ ಅನುದಾನ ಬಿಡುಗಡೆಯಾಗಿದ್ದು ಹಂತ ಹಂತವಾಗಿ ಕಾರ್ಯರೂಪಕ್ಕೆ ತರಲಾಗುವುದು ಎಂದು ಶಾಸಕ ಕಾಮತ್ ಹೇಳಿದರು.
ಈ ಸಂದರ್ಭದಲ್ಲಿ ರಾಜ್ಯ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ನಿತಿನ್ ಕುಮಾರ್, ಸ್ಥಳೀಯ ಕಾರ್ಪೋರೇಟರ್ ಅಬ್ದುಲ್ ಲತೀಫ್, ಮುಖಂಡರಾದ ದೀಪಕ್ ಪೈ, ಅನಿಲ್ ಕುಮಾರ್, ಯೋಗಿಶ್ ಕಾಂಚನ್, ಸುರೇಶ್ ಪಾಂಡೇಶ್ವರ, ನಿತೇಶ್ ರೈ, ವನಮಾಲ ವೈ. ಸುವರ್ಣ, ವನಿತಾ, ಪ್ರಾಣ್ ಕುಮಾರ್, ಸುಭಾಷ್ ನಗರ ಅಸೋಸಿಯೇಷನ್ ಇದರ ಅಧ್ಯಕ್ಷರು, ಪದಾಧಿಕಾರಿಗಳು, ಬಿಜೆಪಿ ಕಾರ್ಯಕರ್ತರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು