ಅವರು ಆಸ್ಪತ್ರೆಯಲ್ಲಿ ಇತ್ತೀಚಿಗೆ ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದರು. ಪೈ ಕುಟುಂಬದ ಎಲ್ಲ ಸದಸ್ಯರು, ಭಾವ ಡಾಬಾಲಕೃಷ್ಣ ಪೈ ಮೊದಲಾದವರು ಜತೆಯಲ್ಲಿದ್ದು ಆರೈಕೆಯಲ್ಲಿ ತೊಡಗಿದ್ದರು. ಆಧುನಿಕ ಮಣಿಪಾಲದ ಶಿಲ್ಪಿ ಡಾಟಿ.ಎಂ.ಎ.ಪೈಯವರ ಹೆಸರು ಹೊತ್ತ ಡಾಟಿಎಂಎ ಪೈ ಪ್ರತಿಷ್ಠಾಾನ, ಡಾಟಿಎಂಎ ಪೈಯವರು ಸ್ಥಾಾಪಿಸಿದ ಮೊದಲ ಕಾಲೇಜು ಶಿಕ್ಷಣ ಸಂಸ್ಥೆ ಎಂಜಿಎಂ ಕಾಲೇಜಿನ ಟ್ರಸ್ಟ್, ಸಿಂಡಿಕೇಟ್ ಬ್ಯಾಾಂಕ್ನ ಪೂರ್ವ ರೂಪ ಐಸಿಡಿಎಸ್ ಲಿ., ‘ಉದಯವಾಣಿ’ಯನ್ನು ನಡೆಸುತ್ತಿರುವ ಮಣಿಪಾಲ್ ಮೀಡಿಯ ನೆಟ್ವರ್ಕ್ ಲಿ. ಮೊದಲಾದ ಸಂಸ್ಥೆೆಗಳ ಅಧ್ಯಕ್ಷರಾಗಿ ಹೀಗೆ ಹಲವು ಸಂಸ್ಥೆಗಳ ಬೆಳವಣಿಗೆಗೆ ಕಾರಣರಾದವರು.
ಕಾನೂನು ಪದವಿಯಲ್ಲಿ ಮೊದಲ ರ್ಯಾಾಂಕ್ 1933ರ ಜೂ. 20ರಂದು ಜನಿಸಿದ ಮೋಹನದಾಸ್ ಪೈ ಯವರು ಡಾಟಿಎಂಎ ಪೈಯವರ ಹಿರಿಯ ಪುತ್ರ. ಇವರಿಗೆ ಮೂರು ವರ್ಷ ಆಗಿರುವಾಗ ತಂದೆಯವರು ಉಡುಪಿಯಿಂದ ಮಣಿಪಾಲಕ್ಕೆ ಸ್ಥಳಾಂತರವಾದ ಕಾರಣ ಇವರೂ ಮಣಿಪಾಲದಲ್ಲಿ ಬೆಳೆದರು. ತಂದೆಯವರು ಆರಂಭಿಸಿದ ಹೊಸ ಶಾಲೆಯಲ್ಲಿ (ಮಣಿಪಾಲ ಅಕಾಡೆಮಿ ಶಾಲೆ), ಉಡುಪಿಯ ಮೋಡರ್ನ್ ಶಾಲೆಯಲ್ಲಿ ಪ್ರಾಾಥಮಿಕ ಶಿಕ್ಷಣವನ್ನು, ಉಡುಪಿಯ ಬೋರ್ಡ್ ಹೈಸ್ಕೂಲ್ನಲ್ಲಿ ಪ್ರೌೌಢಶಾಲಾ ಶಿಕ್ಷಣ ಪಡೆದರು. ಬಳಿಕ ತಂದೆಯವರು ನೂತನವಾಗಿ ಆರಂಭಿಸಿದ ಎಂಜಿಎಂ ಕಾಲೇಜಿನಲ್ಲಿ (1949-51) ಇಂಟರ್ಮೀಡಿಯೆಟ್ ಶಿಕ್ಷಣ ಪಡೆದರು.
ವೃತ್ತಿಿ ಪ್ರವೇಶ: ಶಿಕ್ಷಣದ ಬಳಿಕ ತಂದೆಯವರು ಆರಂಭಿಸಿದ ಸಂಸ್ಥೆಗಳಲ್ಲಿ ತೊಡಗಿದರು. ಅವರು ಮೊದಲಾಗಿ ಪ್ರವೇಶಿಸಿದ್ದು ಮಣಿಪಾಲದಲ್ಲಿ ಹೆಂಚಿನ ಕಾರ್ಖಾನೆ ನಡೆಸುತ್ತಿದ್ದ ಕೆನರಾ ಲ್ಯಾಾಂಡ್ ಇನ್ವೆಸ್ಟ್ಮೆಂಟ್ಸ್ನ ಜನರಲ್ ಮೆನೇಜರ್ ಆಗಿ. ಇದರ ಜತೆ ಮಣಿಪಾಲ್ ಪವರ್ ಪ್ರೆೆಸ್ನ ಆಡಳಿತ ಪಾಲುದಾರರಾಗಿ ಹೆಚ್ಚುವರಿ ಹೊಣೆಗಾರಿಕೆಯನ್ನು ವಹಿಸಿಕೊಂಡರು.
ಆಡಳಿತ ತಜ್ಞ- ಯೋಜನತಜ್ಞ: ಪೈಯವರು ಆಡಳಿತ ಮತ್ತು ಹಣಕಾಸು ಯೋಜನೆಯ ಜವಾಬ್ದಾಾರಿಯನ್ನು ನೋಡಿಕೊಂಡಿದ್ದರೆ ಟಿ.ಸತೀಶ್ ಪೈಯವರು ಉತ್ಪಾಾದನೆಯ ಜವಾಬ್ದಾಾರಿಯನ್ನು ನೋಡಿಕೊಂಡಿರುತ್ತಿದ್ದರು. ಹೊಸ ರೀತಿ ಆಟೋಮೆಟಿಕ್ ಟೈಪ್ಸೆಟ್ಟಿಂಗ್ ಮೆಶಿನ್ ಮತ್ತು ಮುದ್ರಣ ಯಂತ್ರವನ್ನು ಗುಣಮಟ್ಟದ ಮುದ್ರಣ ಕ್ಕಾಗಿ ಹೊರದೇಶದಿಂದ ತರಿಸಲಾಯಿತು. 1961ರಲ್ಲಿ ಪುಸ್ತಕದ ಗುಣಮಟ್ಟದ ಮುದ್ರಣಕ್ಕಾಗಿ ಪ್ರೆಸ್ ರಾಷ್ಟ್ರೀಯ ಪ್ರಶಸ್ತಿಯನ್ನು ಪಡೆದುಕೊಂಡಿತು. ಇದರ ಬಳಿಕ ಹಲವು ರಾಜ್ಯ ಮತ್ತು ರಾಷ್ಟ್ರ ಮಟ್ಟದ ಪ್ರಶಸ್ತಿಗಳು ಮಣಿಪಾಲ್ ಪ್ರೆಸ್ಗೆ ಬಂದವು.
1970ರಲ್ಲಿ ಪೈಯವರ ಮುಂದಾಳತ್ವದಲ್ಲಿ ‘ಉದಯವಾಣಿ’ ದಿನ ಪತ್ರಿಕೆ ಆರಂಭವಾಗಿ ಅಲ್ಪಾಾವಧಿಯಲ್ಲಿಯೇ ಜನಪ್ರಿಯಗೊಂಡಿತು. ಮೋಹನದಾಸ್ ಪೈಯವರು ಆಡಳಿತ ನಿರ್ದೇಶಕರಾಗಿ, ಸತೀಶ್ ಪೈಯವರು ಜಂಟಿ ಆಡಳಿತ ನಿರ್ದೇಶಕರಾಗಿರುವ ಮಣಿಪಾಲ್ ಪ್ರಿಂಟರ್ಸ್ ಆ್ಯಂಡ್ ಪಬ್ಲಿಷರ್ಸ್ ಲಿ.ನಿಂದ ಉದಯವಾಣಿ ಆರಂಭಗೊಂಡಿತು.
1983ರಲ್ಲಿ ಆರಂಭಗೊಂಡ ‘ತರಂಗ’ ವಾರಪತ್ರಿಕೆಯೂ ಮೋಹನದಾಸ್ ಪೈಯವರ ಕನಸಿನ ಕೂಸು. ಮುಖಪುಟ ಮತ್ತು ಒಳಪುಟಗಳನ್ನು ಕಲರ್ನಲ್ಲಿ ಮುದ್ರಿಸಲು ಬೇಕಾದ ಅಲ್ಟ್ರಾಾ ಮೋಡರ್ನ್ ವೆಬ್ ಆಫ್ಸೆಟ್ ಯಂತ್ರವನ್ನು ಸ್ಥಾಾಪಿಸಲಾಯಿತು. ತರಂಗಕ್ಕೆ ಅಗತ್ಯವಾದ ಸ್ವಯಂಚಾಲಿತ ಬೈಂಡಿಂಗ್ ಯಂತ್ರವನ್ನೂ ಅಳವಡಿಸಲಾಯಿತು. ಈ ಗುಣಮಟ್ಟಕ್ಕಾಾಗಿ 2 ಲಕ್ಷ ಪ್ರಸರಣ ಸಂಖ್ಯೆ ದಾಟಿತು.
ಮಣಿಪಾಲ ಪ್ರಿಿಂಟರ್ಸ್ ಆ್ಯಂಡ್ ಪಬ್ಲಿಷರ್ಸ್ ಲಿ. ಹೆಸರನ್ನು ಮಣಿಪಾಲ್ ಮೀಡಿಯ ನೆಟ್ವರ್ಕ್ ಲಿ. ಎಂದು ಬದಲಾಯಿಸಲಾಯಿತು. ಇದರ ಅಧೀನದಲ್ಲಿ ಮಣಿಪಾಲ, ಬೆಂಗಳೂರು, ಹುಬ್ಬಳ್ಳಿ, ಕಲಬುರಗಿ, ದಾವಣಗೆರೆ, ಮುಂಬಯಿಯಿಂದ ಮುದ್ರಣಗೊಳ್ಳುವ ಉದಯವಾಣಿ, ತರಂಗ ವಾರಪತ್ರಿಕೆ, ರೂಪತಾರ ಚಲನಚಿತ್ರ ಮಾಸ ಪತ್ರಿಕೆ, ತುಷಾರ ಮಾಸಿಕ ಡೈಜೆಸ್ಟ್ ಮುದ್ರಣಗೊಂಡು ಓದುಗರನ್ನು ಸೆಳೆಯುತ್ತಿದೆ.
ಐಸಿಡಿಎಸ್ನ ಜಂಟಿ ಆಡಳಿತ ನಿರ್ದೇಶಕರಾಗಿ 1989ರಲ್ಲಿ ನೇಮಕಗೊಂಡ ಪೈಯವರು 1995ರಲ್ಲಿ ಆಡಳಿತ ನಿರ್ದೇಶಕರಾದರು. ಬಳಿಕ ಚೆಯರ್ಮ್ಯಾನ್ ಮತ್ತು ಆಜೀವ ನಿರ್ದೇಶಕರಾಗಿ ಸೇವೆ ಸಲ್ಲಿಸಿದರು. ಎಂಜಿಎಂ ಕಾಲೇಜು ಟ್ರಸ್ಟ್ ಅಧ್ಯಕ್ಷರಾಗಿ ಇದೇ ವೇಳೆ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ, ಪ್ರಾಾದೇಶಿಕ ಜಾನಪದ ರಂಗಕಲೆಗಳ ಸಂಶೋಧನ ಕೇಂದ್ರ, ಎಂಜಿಎಂ ಯಕ್ಷಗಾನ ಕೇಂದ್ರದ ಅಧ್ಯಕ್ಷರಾಗಿಯೂ ಈ ಸಂಸ್ಥೆಗಳ ಅಭಿವೃದ್ಧಿಗೆ ಅಪಾರ ಕೊಡುಗೆ ಸಲ್ಲಿಸಿದ್ದಾಾರೆ.
ಡಾಟಿಎಂಎ ಪೈಯವರು ಉಪಯೋಗಿಸುತ್ತಿದ್ದ ಪರಿಕರಗಳನ್ನು ಮಣಿಪಾಲದ ‘ಸ್ಮೃತಿ ಭವನ’ದಲ್ಲಿ (ಮ್ಯೂಸಿಯಂ) ಕಾಪಿಡಲು ವಿಶೇಷ ಶ್ರಮ ವಹಿಸಿದ್ದರು. ವಿವಿಧ ರೀತಿಗಳ ಕಲೆಗಳಲ್ಲಿ ಅತ್ಯಾಾಸಕ್ತರಾಗಿದ್ದ ಮೋಹನದಾಸ್ ಪೈಯವರು ತಮ್ಮ ಆಸಕ್ತಿಿಯನ್ನು ಮಣಿಪಾಲದ ವಿಜಯನಾಥ ಶೆಣೈಯವರೊಡಗೂಡಿ ಬಹುಮುಖದ ಸಾಂಸ್ಕೃತಿಕ ತಾಣವೆನಿಸಿದ ಹೆರಿಟೇಜ್ ವಿಲೇಜ್ ರೂಪಿಸುವಲ್ಲಿ ಯೋಗದಾನ ಮಾಡಿದ್ದಾಾರೆ. ಸಾರ್ವಜನಿಕ ರಂಗದಲ್ಲಿ ಹೆಚ್ಚಾಾಗಿ ಕಾಣಿಸಿಕೊಳ್ಳದ ಪೈಯವರು ತಂದೆಯ ಮಾದರಿಯಲ್ಲಿ ಆಧುನಿಕ ಕರ್ನಾಟಕದ ಶಿಲ್ಪಿಿ ಎನಿಸಿಕೊಂಡಿದ್ದಾಾರೆ. ಪತ್ರಿಕೋದ್ಯಮದ ಮೂಲಕ ಕರಾವಳಿ ಕರ್ನಾಟಕದ ಅಭಿವೃದ್ಧಿಿಯಲ್ಲಿ ಇವರಿಗೆ ದೂರದೃಷ್ಟಿ ಇತ್ತು.
ಸಾರ್ವಜನಿಕರ ಅಂತಿಮ ದರ್ಶನ ; ಆ. 1ರ ಬೆಳಗ್ಗೆ 9ರಿಂದ 11 ಗಂಟೆವರೆಗೆ ಉಡುಪಿ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.