ಮರೆಯಾದ ಮರಕಡದ ಜ್ಯೋತಿ

ಮಂಗಳೂರು : ಮರಕಡ ಶ್ರೀ ಪರಾಶಕ್ತಿ ಕ್ಷೇತ್ರ ನರೇಂದ್ರನಾಥ ಯೋಗೇಶ್ವರ ಸ್ವಾಮಿ ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮರಕಡ ಶ್ರೀ ಗುರು ಪರಾಶಕ್ತಿ ಮಠದ ಶ್ರೀ ನರೇಂದ್ರನಾಥ ಯೋಗೀಶ್ವರೇಶ್ವರ ಸ್ವಾಮೀಜಿ ಗುರುವಾರ ಮುಂಜಾನೆ ಮರಕಡ ಮಠದಲ್ಲಿ ಹೃದಯಾಘಾತದಿಂದ ನಿಧನರಾದರು.

ಅಪಾರ ಸಂಖ್ಯೆಯ ಭಕ್ತರನ್ನು ಹೊಂದಿದ್ದ ಅವರು, ಮರಕಡದಲ್ಲಿ ಮೂಲ ಮಠ ಹೊಂದಿದ್ದರು.

ತೊಕ್ಕೊಟ್ಟು ಸಮೀಪದ ಮಡ್ಯಾರ್ ಎಂಬಲ್ಲಿ ದೇವಸ್ಥಾನ ನಿರ್ಮಿಸಿದ್ದರು. ಕಂರ್ಬಿಸ್ಥಾನ ಶ್ರೀ ಮಲ್ಲಿಕಾರ್ಜುನ ಕ್ಷೇತ್ರದ ನವೀಕರಣ ಕಾರ್ಯದಲ್ಲೂ ಮಹತ್ವದ ಪಾತ್ರ ನಿರ್ವಹಿಸಿದ್ದರು.

ಮರಕಡದಲ್ಲಿ ಹೊಸ ದೇವಸ್ಥಾನ ಹಾಗೂ ಗುರು ಪೀಠ ನಿರ್ಮಾಣ ಹಂತದಲ್ಲಿದ್ದು ಮುಂದಿನ ತಿಂಗಳು ಗುರು ಪೀಠ ಲೋಕಾರ್ಪಣೆ, ಮೇ ತಿಂಗಳಲ್ಲಿ ದೇವಸ್ಥಾನ ಬ್ರಹ್ಮಕಲಶೋತ್ಸವಕ್ಕೆ ದಿನ ನಿಗದಿಯಾಗಿತ್ತು.

ಆದರೆ ವಿಧಿಯ ಆಟವೇ ಬೇರೆಯಾಗಿತ್ತು.

 
 
 
 
 
 
 
 
 
 
 

Leave a Reply