ಹಿಜಾಬ್ ಇಸ್ಲಾಂನ ಅತ್ಯಗತ್ಯ ಭಾಗವಲ್ಲ – ರಾಜ್ಯ ಹೈಕೋರ್ಟ್ ತೀರ್ಪು ಅತ್ಯಂತ ಸ್ವಾಗಾತಾರ್ಹ – ಮಟ್ಟಾರ್

ಉಡುಪಿ:- ಉಡುಪಿಯಿಂದ ಅರಂಭವಾದ ಹಿಜಾಬ್ ಪ್ರಕರಣ ಅಂತರಾಷ್ಟ್ರೀಯ ಮಟ್ಟದಲ್ಲಿ ಧ್ವನಿಯಾಗಿ ಹಿಜಾಬ್‍ಗೆ ಸಂಬಂಧಿಸಿದಂತೆ ಶಾಲಾ ಬಾಲಕಿಯೊಬ್ಬಳು ಹೈಕೋರ್ಟ್ ಮೆಟ್ಟಿಲು ಹತ್ತಿ ಕಳೆದ ಕೆಲವು ತಿಂಗಳುಗಳಿಂದ ಅಂತರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದ್ದ ಹಿಜಾಬ್ ಪ್ರಕರಣದ ಬಗ್ಗೆ ರಾಜ್ಯ ಹೈಕೋರ್ಟ್‍ನ ತ್ರಿಸದಸ್ಯರ ಪೀಠ “ಹಿಜಾಬ್ ಇಸ್ಲಾಂನ ಅತ್ಯಗತ್ಯ ಭಾಗವಲ್ಲ” ಎಂದು ನೀಡಿದ ತೀರ್ಪು ಅತ್ಯಂತ ಉಲ್ಲೇಖನಿಯ, ಸ್ವಾಗಾತಾರ್ಹ ಮತ್ತು ಸಮಾಜಕ್ಕೆ ಅತ್ಯುತ್ತಮ ಸಂದೇಶ ಎಂದು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರ್ ರತ್ನಾಕರ ಹೆಗ್ಡೆಯವರು ರಾಜ್ಯ ಉಚ್ಛನ್ಯಾಯಾಲಯದ ತೀರ್ಪುನ್ನು ಸ್ವಾಗತಿಸಿ ತಮ್ಮ ಪ್ರತಿಕ್ರಿಯೆಯನ್ನು ನೀಡಿದ್ದಾರೆ.

 
 
 
 
 
 
 
 
 
 
 

Leave a Reply