ಈ ವೇಳೆ ಮಾತನಾಡಿದ ಮೀನುಗಾರ ಮುಖಂಡ ಯಶ್ಪಾಲ್ ಸುವರ್ಣ ಅನಧಿಕೃತ ಸ್ಟಾಲ್ ಗಳಲ್ಲಿ ಮೀನು ಮಾರಾಟ ಮಾಡುವವರ ಸಂಖ್ಯೆ ಇತ್ತೀಚೆಗೆ ಹೆಚ್ಚಾಗುತ್ತಿದ್ದು ಅಲ್ಲಿ ಫಾರ್ಮಾಲಿನ್ ರಾಸಾಯನಿಕ ಬಳಕೆಯಾಗಿದ್ದರೆ ಅದಕ್ಕೆ ಮೀನುಗಾರರು ಜವಾಬ್ದಾರರನ್ನಾಗಿ ಮಾಡುವುದು ಸರಿಯಲ್ಲ. ಎಲ್ಲಿಯಾದರೂ ಫಾರ್ಮಾಲಿನ್ ರಾಸಾಯನಿಕ ಬಳಕೆಯಾಗದ್ದಲ್ಲಿ ಅದಕ್ಕೆ ಸೂಕ್ತ ದಾಖಲೆ ನೀಡಬೇಕು.
ಮೀನಿನ ಗುಣಮಟ್ಟದ ವಿಷಯದಲ್ಲಿ ಗ್ರಾಹಕರು ಜಾಗರೂಕತೆಯಿಂದ ವ್ಯವಹರಿಸತಕ್ಕದ್ದು, ಕಾನೂನು ಬಾಹಿರವಾಗಿ ಕಾರ್ಯಾಚರಿಸುತ್ತಿರುವವರ ವಿರುದ್ದ ಜಿಲ್ಲಾಡಳಿತ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದರು. ಈ ವೇಳೆ ಮೀನುಗಾರರ ಮುಖಂಡರಾದ ಯಶಪಾಲ್ ಸುವರ್ಣ, ರಮೇಶ್ ಕೋಟ್ಯಾನ್, ಕಿಶೋರ್ ಡಿ ಸುವರ್ಣ, ಸುಭಾಶ್ ಮೆಂಡನ್, ರಾಮಚಂದ್ರ ಕುಂದರ್, ಜಯ ಸಿ ಕೋಟ್ಯಾನ್, ದಯಾನಂದ ಸುವರ್ಣ, ರತ್ನಾಕರ ಸಾಲ್ಯಾನ್, ವಿನಯ್ ಕರ್ಕೇರಾ ಹಾಗೂ ಇತರರು ಉಪಸ್ಥಿತರಿದ್ದರು.