ನವಂಬರ್ 19ರಂದು ಅಂತರಾಷ್ಟ್ರೀಯ ಪುರುಷರ ದಿನಾಚರಣೆಯನ್ನು ಉಡುಪಿಯ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ ಮಳಿಗೆಯಲ್ಲಿ ಆಚರಿಸಲಾಗುತ್ತಿದೆ. ಸಮಾನ ಮನಸ್ಕ ಗೆಳತಿಯರು ಈ ಒಂದು ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಮಧ್ಯಾಹ್ನ 3:30ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದೆ.
ಸಭಾಧ್ಯಕ್ಷತೆಯನ್ನು ನಾಗರಾಜ್ ಜಿಎಸ್ ವಹಿಸಿಕೊಳ್ಳಲಿದ್ದಾರೆ. ಅತಿಥಿಗಳಾಗಿ ರವಿರಾಜ್ ಹೆಚ್ ಪಿ, ವಿಜಿ ಶೆಟ್ಟಿ, ಜನಾರ್ದನ್ ಕೊಡವೂರು, ದಿವಾಕರ್ ಸನಿಲ್ ಭಾಗವಹಿಸಲಿದ್ದಾರೆ.
ಈ ಸಂದರ್ಭದಲ್ಲಿ ಉಡುಪಿ ವಿಶ್ವನಾತ ಶೆಣೈ, ಹಫೀಸ್ ರೆಹಮಾನ್ ಹಾಗೂ ಸುಶಾಂತ್ ಕೆರೆಮಠ ಇವರನ್ನು ಸನ್ಮಾನಿಸಲಾಗುವುದು ಎಂದು ಪ್ರಕಟಣೆಯಲ್ಲಿ ಕಾರ್ಯಕ್ರಮದ ಸಂಚಾಲಕಿ ವಿದ್ಯಾ ಸರಸ್ವತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







